ಶ್ರೀನಗರ: ಜಮ್ಮು ಮತ್ತು ಶ್ರೀನಗರದ ಹೆದ್ದಾರಿಯಲ್ಲಿ ಮತ್ತೆ ಹಿಮಕುಸಿತ ಹಾಗೂ ಭೂಕುಸಿತ ಮುಂದುವರಿದಿದೆ. ಸೇನಾ ಕ್ಯಾಂಪ್ನಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಕಾಣೆಯಾಗಿದ್ದ ನಾಲ್ವರು ಯೋಧರ ಮೃತ ದೇಹಗಳು ಶುಕ್ರವಾರ ಪತ್ತೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿದೆ. ರಾಜ್ಯದ ಹಾಸನ ಜಿಲ್ಲೆಯ ದೇವಿಹಳ್ಳಿಯ ಯೋಧ ಸಂದೀಪ್ ಶೆಟ್ಟಿ ಅವರು ದುರ್ಘಟನೆಯಲ್ಲಿ ಹುತಾತ್ಮರಾಗಿದ್ದಾರೆ.