<p><strong>ನವದೆಹಲಿ</strong>: ಲೋಕಸಭಾ ಸದಸ್ಯ ಇ. ಅಹಮದ್ ಅವರಿಗೆ ಸಂತಾಪ ಸೂಚಿಸಿದ ನಂತರ ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭವಾಗಿದೆ.</p>.<p>ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡುವ ಮುನ್ನ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಇ. ಅಹಮದ್ ಅವರಿಗೆ ಸಂತಾಪ ಸೂಚಿಸಿ ಬಜೆಟ್ ಮಂಡಿಸುವಂತೆ ಸೂಚಿಸಿದ್ದಾರೆ.</p>.<p>ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಗದ್ದಲವೆಬ್ಬಿಸಿವೆ. ಲೋಕಸಭಾ ಸದಸ್ಯರಾಗಿದ್ದ ಇ. ಅಹಮದ್ ಅವರು ನಿನ್ನೆ ಸಂಸತ್ನಲ್ಲೇ ಕುಸಿದು ಬಿದ್ದು ಇಂದು ನಿಧನರಾಗಿದ್ದಾರೆ, ನಮ್ಮನ್ನಗಲಿದ ಹಿರಿಯ ಮುತ್ಸದಿ ಇ. ಅಹಮದ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದಿನ ಕಲಾಪ ಮುಂದೂಡಬೇಕಿತ್ತು. ಈ ಸಂದರ್ಭದಲ್ಲಿ ಬಜೆಟ್ ಮಂಡನೆ ನಡೆಸುತ್ತಿರುವುದು ಸರಿಯಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p>.<p>ಖರ್ಗೆ ಅವರ ಮಾತುಗಳನ್ನು ನಿಲ್ಲಿಸುವಂತೆ ಸ್ಪೀಕರ್ ಸೂಚಿಸಿದ್ದು, ಈಗಾಗಲೇ ಬಜೆಟ್ ಮಂಡನೆ ನಡೆಸುವಂತೆ ಅನುಮತಿ ನೀಡಲಾಗಿದೆ, ನಿಗದಿಯಂತೆ ಇಂದು ಬಜೆಟ್ ಮಂಡನೆ ನಡೆಯಲಿದ್ದು, ಬಜೆಟ್ ಮಂಡನೆ ಮಾಡುವಂತೆ ಜೇಟ್ಲಿ ಅವರಿಗೆ ಸೂಚಿಸಿದ್ದಾರೆ.</p>.<p>ನೇರ ಪ್ರಸಾರಕ್ಕಾಗಿ ಇಲ್ಲಿ <a href="http://loksabhatv.nic.in/Index.aspx" target="_blank"><span style="color:#ff0000;">ಕ್ಲಿಕ್</span></a> ಮಾಡಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭಾ ಸದಸ್ಯ ಇ. ಅಹಮದ್ ಅವರಿಗೆ ಸಂತಾಪ ಸೂಚಿಸಿದ ನಂತರ ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭವಾಗಿದೆ.</p>.<p>ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡುವ ಮುನ್ನ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಇ. ಅಹಮದ್ ಅವರಿಗೆ ಸಂತಾಪ ಸೂಚಿಸಿ ಬಜೆಟ್ ಮಂಡಿಸುವಂತೆ ಸೂಚಿಸಿದ್ದಾರೆ.</p>.<p>ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಗದ್ದಲವೆಬ್ಬಿಸಿವೆ. ಲೋಕಸಭಾ ಸದಸ್ಯರಾಗಿದ್ದ ಇ. ಅಹಮದ್ ಅವರು ನಿನ್ನೆ ಸಂಸತ್ನಲ್ಲೇ ಕುಸಿದು ಬಿದ್ದು ಇಂದು ನಿಧನರಾಗಿದ್ದಾರೆ, ನಮ್ಮನ್ನಗಲಿದ ಹಿರಿಯ ಮುತ್ಸದಿ ಇ. ಅಹಮದ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದಿನ ಕಲಾಪ ಮುಂದೂಡಬೇಕಿತ್ತು. ಈ ಸಂದರ್ಭದಲ್ಲಿ ಬಜೆಟ್ ಮಂಡನೆ ನಡೆಸುತ್ತಿರುವುದು ಸರಿಯಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p>.<p>ಖರ್ಗೆ ಅವರ ಮಾತುಗಳನ್ನು ನಿಲ್ಲಿಸುವಂತೆ ಸ್ಪೀಕರ್ ಸೂಚಿಸಿದ್ದು, ಈಗಾಗಲೇ ಬಜೆಟ್ ಮಂಡನೆ ನಡೆಸುವಂತೆ ಅನುಮತಿ ನೀಡಲಾಗಿದೆ, ನಿಗದಿಯಂತೆ ಇಂದು ಬಜೆಟ್ ಮಂಡನೆ ನಡೆಯಲಿದ್ದು, ಬಜೆಟ್ ಮಂಡನೆ ಮಾಡುವಂತೆ ಜೇಟ್ಲಿ ಅವರಿಗೆ ಸೂಚಿಸಿದ್ದಾರೆ.</p>.<p>ನೇರ ಪ್ರಸಾರಕ್ಕಾಗಿ ಇಲ್ಲಿ <a href="http://loksabhatv.nic.in/Index.aspx" target="_blank"><span style="color:#ff0000;">ಕ್ಲಿಕ್</span></a> ಮಾಡಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>