<p><strong>ಹುಬ್ಬಳ್ಳಿ: </strong>ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದ 2017–18ನೇ ಸಾಲಿನ ಬಜೆಟ್ನಲ್ಲಿ ನೈರುತ್ಯ ರೈಲ್ವೆಗೆ ₹3,174 ಕೋಟಿ ಹಂಚಿಕೆ ಮಾಡಿದ್ದಾರೆ.</p>.<p>‘ಇದು ಕಳೆದ ವರ್ಷದ ಅನುದಾನಕ್ಕಿಂತ ಶೇ 19.17ರಷ್ಟು ಜಾಸ್ತಿ ಇದೆ. 2016–17ನೇ ಸಾಲಿನಲ್ಲಿ ₹2,663.42 ಕೋಟಿ ಹಂಚಿಕೆ ಮಾಡಲಾಗಿತ್ತು’ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ.ಕೆ. ಗುಪ್ತಾ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ನಮ್ಮ ಕೋರಿಕೆ ಇದ್ದಿದ್ದು ₹2,900 ಕೋಟಿ. ಆದರೆ ಹಂಚಿಕೆ ಆಗಿರುವುದು ₹3,174 ಕೋಟಿ. ಅಂದರೆ ಹೆಚ್ಚುವರಿಯಾಗಿ ₹274 ಕೋಟಿ ಸಿಕ್ಕಿದ್ದು, ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅನುಕೂಲ ಆಗಲಿದೆ’ ಎಂದರು.</p>.<p>‘ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ಯಾವ ಯೋಜನೆಗೆ ಎಷ್ಟುಅನುದಾನ ಹಂಚಿಕೆ ಮಾಡಲಾಗಿದೆ ಎಂಬುದರ ವಿವರಗಳು ಇನ್ನೂ ಲಭ್ಯವಾಗಿಲ್ಲ. ಶುಕ್ರವಾರ ಅಥವಾ ಶನಿವಾರ ಯೋಜನಾವಾರು ಮಾಹಿತಿ ದೊರೆಯಲಿದೆ’ ಎಂದು ಅವರು ವಿವರಿಸಿದರು.</p>.<p><strong>ನಿಲ್ದಾಣ ಮರುಅಭಿವೃದ್ಧಿ</strong><br /> ‘ದೇಶದಲ್ಲಿನ 25 ರೈಲ್ವೆ ನಿಲ್ದಾಣಗಳನ್ನು ಮರು–ಅಭಿವೃದ್ಧಿಪಡಿಸುತ್ತಿದ್ದು, ಅವುಗಳಲ್ಲಿ ಬೆಂಗಳೂರಿನ ಯಶವಂತಪುರ ಮತ್ತು ಕಂಟೊನ್ಮೆಂಟ್ ರೈಲ್ವೆ ನಿಲ್ದಾಣಗಳು ಸೇರಿವೆ. ಖಾಸಗಿ ಸಹಭಾಗಿತ್ವದಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು. ಅಲ್ಲಿನ ಖಾಲಿ ಜಾಗವನ್ನು ಅಭಿವೃದ್ಧಿಪಡಿಸುವುದರ ಮೂಲಕ ಆದಾಯ ಗಳಿಸುವ ಉದ್ದೇಶವೂ ಇದೆ’ ಎಂದು ಎ.ಕೆ. ಗುಪ್ತಾ ವಿವರಿಸಿದರು.</p>.<p>‘ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹಂಚಿಕೆಯಾಗಿರುವ ಅನುದಾನದಲ್ಲಿ ಬಹುತೇಕ ಹಣವನ್ನು ಜೋಡಿ ರೈಲು ಮಾರ್ಗ ನಿರ್ಮಾಣ ಹಾಗೂ ಮಾರ್ಗದ ಸಾಮರ್ಥ್ಯ ಹೆಚ್ಚಳಕ್ಕೆ ಬಳಸಲಾಗುವುದು. ಹುಬ್ಬಳ್ಳಿ–ಚಿಕ್ಕಜಾಜೂರು ಮತ್ತು ಹುಬ್ಬಳ್ಳಿ–ಹೊಸಪೇಟೆ ಜೋಡಿ ಮಾರ್ಗ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಹಂಚಿಕೆಯಾಗಿರುವ ಸಾಧ್ಯತೆ ಇದೆ’ ಎಂದು ಹೇಳಿದರು.</p>.<p><strong>165 ಕಿ.ಮೀ ಹೊಸ ಮಾರ್ಗ:</strong> ‘ಒಟ್ಟು 2,800 ಕಿ.ಮೀ ಉದ್ದದ ರೈಲ್ವೆ ಮಾರ್ಗವನ್ನು ದೇಶದಲ್ಲಿ ಹೊಸದಾಗಿ ಅಭಿವೃದ್ಧಿಪಡಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಅದರಲ್ಲಿ ನೈರುತ್ಯ ರೈಲ್ವೆಯ 165 ಕಿ.ಮೀ ಸೇರಿದೆ. ಕಳೆದ ವರ್ಷ 231 ಕಿ.ಮೀ ಹೊಸ ಮಾರ್ಗ ನಿರ್ಮಾಣಕ್ಕೆ ಅನುದಾನ ಹಂಚಿಕೆ ಮಾಡಲಾಗಿತ್ತು’ ಎಂದರು.</p>.<p>‘ರಾಜ್ಯದಲ್ಲಿ ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳು 350 ಇದ್ದು, ಮೂರು ವರ್ಷಗಳಲ್ಲಿ ಅವುಗಳನ್ನು ನಿರ್ಮೂಲನೆ ಮಾಡಲಾಗುವುದು. ದೇಶದಲ್ಲಿನ 2,000 ರೈಲ್ವೆ ನಿಲ್ದಾಣಗಳಲ್ಲಿ ಸೌರವಿದ್ಯುತ್ ಉತ್ಪಾದನೆಗೆ ಅವಕಾಶ ಕಲ್ಪಿಸುತ್ತಿದ್ದು, ಈ ಯೋಜನೆ ವ್ಯಾಪ್ತಿಗೆ ರಾಜ್ಯದ 34 ನಿಲ್ದಾಣಗಳು ಸೇರಿವೆ. ಇದುವರೆಗೂ 900 ರೈಲ್ವೆ ಬೋಗಿಗಳಲ್ಲಿ ಜೈವಿಕ ಶೌಚಾಲಯಗಳನ್ನು ಅಳವಡಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೋಗಿಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು ಎಂದು ವಿವರಿಸಿದರು.</p>.<p><strong>ಅಂಕಿ ಅಂಶ</strong><br /> * 165ಕಿ.ಮೀ ಹೊಸ ರೈಲು ಮಾರ್ಗ ನಿರ್ಮಾಣ</p>.<p>* 34ರೈಲ್ವೆ ನಿಲ್ದಾಣಗಳಲ್ಲಿ ಸೌರವಿದ್ಯುತ್ ಉತ್ಪಾದನೆ<br /> <br /> * 350ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳಿಗೆ 3 ವರ್ಷದಲ್ಲಿ ಮುಕ್ತಿ</p>.<p><strong> ಬಜೆಟ್ನಲ್ಲಿ ಮೆಟ್ರೊ</strong></p>.<p>* ನಮ್ಮ ಮೆಟ್ರೊ ಎರಡು ಹೊಸ ಲೈನ್ಗಳಿಗೆ ಒಪ್ಪಿಗೆ<br /> * ಎರಡನೇ ಹಂತದ ನಾಲ್ಕು ಮಾರ್ಗಗಳ ವಿಸ್ತರಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದ 2017–18ನೇ ಸಾಲಿನ ಬಜೆಟ್ನಲ್ಲಿ ನೈರುತ್ಯ ರೈಲ್ವೆಗೆ ₹3,174 ಕೋಟಿ ಹಂಚಿಕೆ ಮಾಡಿದ್ದಾರೆ.</p>.<p>‘ಇದು ಕಳೆದ ವರ್ಷದ ಅನುದಾನಕ್ಕಿಂತ ಶೇ 19.17ರಷ್ಟು ಜಾಸ್ತಿ ಇದೆ. 2016–17ನೇ ಸಾಲಿನಲ್ಲಿ ₹2,663.42 ಕೋಟಿ ಹಂಚಿಕೆ ಮಾಡಲಾಗಿತ್ತು’ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ.ಕೆ. ಗುಪ್ತಾ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ನಮ್ಮ ಕೋರಿಕೆ ಇದ್ದಿದ್ದು ₹2,900 ಕೋಟಿ. ಆದರೆ ಹಂಚಿಕೆ ಆಗಿರುವುದು ₹3,174 ಕೋಟಿ. ಅಂದರೆ ಹೆಚ್ಚುವರಿಯಾಗಿ ₹274 ಕೋಟಿ ಸಿಕ್ಕಿದ್ದು, ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅನುಕೂಲ ಆಗಲಿದೆ’ ಎಂದರು.</p>.<p>‘ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ಯಾವ ಯೋಜನೆಗೆ ಎಷ್ಟುಅನುದಾನ ಹಂಚಿಕೆ ಮಾಡಲಾಗಿದೆ ಎಂಬುದರ ವಿವರಗಳು ಇನ್ನೂ ಲಭ್ಯವಾಗಿಲ್ಲ. ಶುಕ್ರವಾರ ಅಥವಾ ಶನಿವಾರ ಯೋಜನಾವಾರು ಮಾಹಿತಿ ದೊರೆಯಲಿದೆ’ ಎಂದು ಅವರು ವಿವರಿಸಿದರು.</p>.<p><strong>ನಿಲ್ದಾಣ ಮರುಅಭಿವೃದ್ಧಿ</strong><br /> ‘ದೇಶದಲ್ಲಿನ 25 ರೈಲ್ವೆ ನಿಲ್ದಾಣಗಳನ್ನು ಮರು–ಅಭಿವೃದ್ಧಿಪಡಿಸುತ್ತಿದ್ದು, ಅವುಗಳಲ್ಲಿ ಬೆಂಗಳೂರಿನ ಯಶವಂತಪುರ ಮತ್ತು ಕಂಟೊನ್ಮೆಂಟ್ ರೈಲ್ವೆ ನಿಲ್ದಾಣಗಳು ಸೇರಿವೆ. ಖಾಸಗಿ ಸಹಭಾಗಿತ್ವದಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು. ಅಲ್ಲಿನ ಖಾಲಿ ಜಾಗವನ್ನು ಅಭಿವೃದ್ಧಿಪಡಿಸುವುದರ ಮೂಲಕ ಆದಾಯ ಗಳಿಸುವ ಉದ್ದೇಶವೂ ಇದೆ’ ಎಂದು ಎ.ಕೆ. ಗುಪ್ತಾ ವಿವರಿಸಿದರು.</p>.<p>‘ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹಂಚಿಕೆಯಾಗಿರುವ ಅನುದಾನದಲ್ಲಿ ಬಹುತೇಕ ಹಣವನ್ನು ಜೋಡಿ ರೈಲು ಮಾರ್ಗ ನಿರ್ಮಾಣ ಹಾಗೂ ಮಾರ್ಗದ ಸಾಮರ್ಥ್ಯ ಹೆಚ್ಚಳಕ್ಕೆ ಬಳಸಲಾಗುವುದು. ಹುಬ್ಬಳ್ಳಿ–ಚಿಕ್ಕಜಾಜೂರು ಮತ್ತು ಹುಬ್ಬಳ್ಳಿ–ಹೊಸಪೇಟೆ ಜೋಡಿ ಮಾರ್ಗ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಹಂಚಿಕೆಯಾಗಿರುವ ಸಾಧ್ಯತೆ ಇದೆ’ ಎಂದು ಹೇಳಿದರು.</p>.<p><strong>165 ಕಿ.ಮೀ ಹೊಸ ಮಾರ್ಗ:</strong> ‘ಒಟ್ಟು 2,800 ಕಿ.ಮೀ ಉದ್ದದ ರೈಲ್ವೆ ಮಾರ್ಗವನ್ನು ದೇಶದಲ್ಲಿ ಹೊಸದಾಗಿ ಅಭಿವೃದ್ಧಿಪಡಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಅದರಲ್ಲಿ ನೈರುತ್ಯ ರೈಲ್ವೆಯ 165 ಕಿ.ಮೀ ಸೇರಿದೆ. ಕಳೆದ ವರ್ಷ 231 ಕಿ.ಮೀ ಹೊಸ ಮಾರ್ಗ ನಿರ್ಮಾಣಕ್ಕೆ ಅನುದಾನ ಹಂಚಿಕೆ ಮಾಡಲಾಗಿತ್ತು’ ಎಂದರು.</p>.<p>‘ರಾಜ್ಯದಲ್ಲಿ ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳು 350 ಇದ್ದು, ಮೂರು ವರ್ಷಗಳಲ್ಲಿ ಅವುಗಳನ್ನು ನಿರ್ಮೂಲನೆ ಮಾಡಲಾಗುವುದು. ದೇಶದಲ್ಲಿನ 2,000 ರೈಲ್ವೆ ನಿಲ್ದಾಣಗಳಲ್ಲಿ ಸೌರವಿದ್ಯುತ್ ಉತ್ಪಾದನೆಗೆ ಅವಕಾಶ ಕಲ್ಪಿಸುತ್ತಿದ್ದು, ಈ ಯೋಜನೆ ವ್ಯಾಪ್ತಿಗೆ ರಾಜ್ಯದ 34 ನಿಲ್ದಾಣಗಳು ಸೇರಿವೆ. ಇದುವರೆಗೂ 900 ರೈಲ್ವೆ ಬೋಗಿಗಳಲ್ಲಿ ಜೈವಿಕ ಶೌಚಾಲಯಗಳನ್ನು ಅಳವಡಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೋಗಿಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು ಎಂದು ವಿವರಿಸಿದರು.</p>.<p><strong>ಅಂಕಿ ಅಂಶ</strong><br /> * 165ಕಿ.ಮೀ ಹೊಸ ರೈಲು ಮಾರ್ಗ ನಿರ್ಮಾಣ</p>.<p>* 34ರೈಲ್ವೆ ನಿಲ್ದಾಣಗಳಲ್ಲಿ ಸೌರವಿದ್ಯುತ್ ಉತ್ಪಾದನೆ<br /> <br /> * 350ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳಿಗೆ 3 ವರ್ಷದಲ್ಲಿ ಮುಕ್ತಿ</p>.<p><strong> ಬಜೆಟ್ನಲ್ಲಿ ಮೆಟ್ರೊ</strong></p>.<p>* ನಮ್ಮ ಮೆಟ್ರೊ ಎರಡು ಹೊಸ ಲೈನ್ಗಳಿಗೆ ಒಪ್ಪಿಗೆ<br /> * ಎರಡನೇ ಹಂತದ ನಾಲ್ಕು ಮಾರ್ಗಗಳ ವಿಸ್ತರಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>