<p><strong>ಚಾಮರಾಜನಗರ: </strong>‘ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಎಚ್.ಎಸ್. ಮಹದೇವಪ್ರಸಾದ್ ಅವರ ಪತ್ನಿ ಡಾ.ಎಂ.ಸಿ. ಮೋಹನ್ಕುಮಾರಿ(ಗೀತಾ ಮಹದೇವಪ್ರಸಾದ್) ಅವರೇ ಕಾಂಗ್ರೆಸ್ನ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.</p>.<p>ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಹಳ್ಳಿಯಲ್ಲಿ ಭಾನುವಾರ ನಡೆದ ಮಹದೇವಪ್ರಸಾದ್ ಅವರ ಮಹಾಸ್ಮರಣೆ ಮತ್ತು ‘ಸೇವಾ ಪಥ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಒಂದೇ ಬಾರಿಗೆ ಉಪ ಚುನಾವಣೆ ಘೋಷಣೆಯಾಗಲಿದೆ. ಮಹದೇವಪ್ರಸಾದ್ ಅವರ ಕನಸುಗಳನ್ನು ನನಸು ಮಾಡುವ ದೃಷ್ಟಿಯಿಂದ ಅವರ ಪತ್ನಿಯನ್ನೇ ಕಣಕ್ಕೆ ಇಳಿಸಲಾಗುವುದು. ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ಅಧಿಕೃತವಾಗಿ ಗೀತಾ ಅವರ ಹೆಸರನ್ನು ಘೋಷಿಸಲಾಗುವುದು ಎಂದರು.</p>.<p><strong>ಟೀಕೆ: </strong>‘ಬಿ.ಎಸ್. ಯಡಿಯೂರಪ್ಪ ಅವರಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲಲು ಶಕ್ತಿ ಇಲ್ಲ. ಹಾಗಾಗಿ, ಗೊಂದಲದ ಹೇಳಿಕೆ ನೀಡಿ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.</p>.<p><strong>ನಿರಂಜನ್ಕುಮಾರ್ ಸ್ಪರ್ಧೆ</strong><br /> ಮಹದೇವಪ್ರಸಾದ್ ವಿರುದ್ಧ 2 ಬಾರಿ ಸ್ಪರ್ಧಿಸಿ ಸೋತಿರುವ ಸಿ.ಎಸ್. ನಿರಂಜನ್ಕುಮಾರ್ ಅವರೇ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.</p>.<p>ಈಗಾಗಲೇ, ಕಮಲ ಪಾಳಯದ ವರಿಷ್ಠರು ಗುಂಡ್ಲುಪೇಟೆ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ನಿರಂಜನ್ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>‘ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಎಚ್.ಎಸ್. ಮಹದೇವಪ್ರಸಾದ್ ಅವರ ಪತ್ನಿ ಡಾ.ಎಂ.ಸಿ. ಮೋಹನ್ಕುಮಾರಿ(ಗೀತಾ ಮಹದೇವಪ್ರಸಾದ್) ಅವರೇ ಕಾಂಗ್ರೆಸ್ನ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.</p>.<p>ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಹಳ್ಳಿಯಲ್ಲಿ ಭಾನುವಾರ ನಡೆದ ಮಹದೇವಪ್ರಸಾದ್ ಅವರ ಮಹಾಸ್ಮರಣೆ ಮತ್ತು ‘ಸೇವಾ ಪಥ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಒಂದೇ ಬಾರಿಗೆ ಉಪ ಚುನಾವಣೆ ಘೋಷಣೆಯಾಗಲಿದೆ. ಮಹದೇವಪ್ರಸಾದ್ ಅವರ ಕನಸುಗಳನ್ನು ನನಸು ಮಾಡುವ ದೃಷ್ಟಿಯಿಂದ ಅವರ ಪತ್ನಿಯನ್ನೇ ಕಣಕ್ಕೆ ಇಳಿಸಲಾಗುವುದು. ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ಅಧಿಕೃತವಾಗಿ ಗೀತಾ ಅವರ ಹೆಸರನ್ನು ಘೋಷಿಸಲಾಗುವುದು ಎಂದರು.</p>.<p><strong>ಟೀಕೆ: </strong>‘ಬಿ.ಎಸ್. ಯಡಿಯೂರಪ್ಪ ಅವರಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲಲು ಶಕ್ತಿ ಇಲ್ಲ. ಹಾಗಾಗಿ, ಗೊಂದಲದ ಹೇಳಿಕೆ ನೀಡಿ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.</p>.<p><strong>ನಿರಂಜನ್ಕುಮಾರ್ ಸ್ಪರ್ಧೆ</strong><br /> ಮಹದೇವಪ್ರಸಾದ್ ವಿರುದ್ಧ 2 ಬಾರಿ ಸ್ಪರ್ಧಿಸಿ ಸೋತಿರುವ ಸಿ.ಎಸ್. ನಿರಂಜನ್ಕುಮಾರ್ ಅವರೇ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.</p>.<p>ಈಗಾಗಲೇ, ಕಮಲ ಪಾಳಯದ ವರಿಷ್ಠರು ಗುಂಡ್ಲುಪೇಟೆ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ನಿರಂಜನ್ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>