ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಭಾಗದಲ್ಲಿ ಕಂದಾಯ ಭೂಮಿ ಮತ್ತು ಸರ್ಕಾರಿ ಭೂಮಿಯ ಹೆಚ್ಚು ಇದೆ. ಈ ಭಾಗದಲ್ಲಿ ಬೆಂಕಿ ತಡೆಯಲು ‘ಫೈರ್ಲೈನ್’ ನಿರ್ಮಿಸುತ್ತಿಲ್ಲ. ಇಲ್ಲಿರುವ ಅಪರೂಪದ ಹುಲ್ಲುಗಾವಲು, ಶೋಲಾ ಅರಣ್ಯ ಪ್ರತಿ ವರ್ಷ ಕಿಡಿಗೇಡಿಗಳು ಹಚ್ಚುವ ಕಾಡ್ಗಿಚ್ಚಿಗೆ ಬಲಿಯಾಗುತ್ತಿದೆ. ಈ ಬಾರಿಯೂ ಕಿಡಿಗೇಡಿಗಳು ಗಿರಿಗೆ ಬೆಂಕಿ ಇಟ್ಟಿರುವ ಶಂಕೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.