ಮೈಸೂರು ಪೊಲೀಸ್ ತರಬೇತಿ ಶಾಲೆಯ ಮುಖ್ಯಸ್ಥ ಮಧುಕರ್ ಶೆಟ್ಟಿ, ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಲಾಬೂರಾಮ್ ಹಾಗೂ ಸಿಸಿಬಿ ಡಿಸಿಪಿ ಕೌಶಲೇಂದ್ರ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿದ್ದು, ಏಪ್ರಿಲ್ 1ರಂದು ರಾಜ್ಯ ಸೇವೆಯಿಂದ ಬಿಡುಗಡೆಯಾಗಲಿದ್ದಾರೆ. ಇದೇ ವೇಳೆ ನಾರಂಗ್ ಸಹ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ತೆರಳಲಿದ್ದಾರೆ.