<p><strong>ಇಂಫಾಲ್:</strong> ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಮಣಿಪುರ ಮುಖ್ಯಮಂತ್ರಿಯಾಗಿ ಬಿಜೆಪಿಯ ಎನ್. ಬಿರೇನ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p>.<p>ಬಿಜೆಪಿ ಮತ್ತು ಮಿತ್ರ ಪಕ್ಷಗಳ ಎಂಟು ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.</p>.<p>ಬಿಜೆಪಿಗೆ ಈಗ ಬೆಂಬಲ ಸೂಚಿಸಿರುವ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ಮನಸ್ಸು ಬದಲಿಸದಂತೆ ಸಚಿವ ಸ್ಥಾನಗಳನ್ನು ಹಂಚಲಾಗಿದೆ. ಎನ್ಪಿಪಿಯ ವೈ. ಜಾಯ್ಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ನಾಲ್ವರು ಸದಸ್ಯರನ್ನು ಹೊಂದಿರುವ ಎನ್ಪಿಪಿಯ ಎನ್. ಕಯಿಸಿ ಅವರನ್ನೂ ಸಚಿವರನ್ನಾಗಿ ಮಾಡಲಾಗಿದೆ.</p>.<p>ನಾಲ್ವರು ಶಾಸಕರನ್ನು ಹೊಂದಿರುವ ನಾಗಾ ಪೀಪಲ್ಸ್ ಫ್ರಂಟ್ನ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ. ಎಲ್ಜೆಪಿಯ ಏಕೈಕ ಶಾಸಕ ಕರಮ್ ಶ್ಯಾಮ್ ಅವರಿಗೂ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿರುವ ಟಿ. ಶ್ಯಾಮಕುಮಾರ್ ಅವರೂ ಸಚಿವರಾಗಿದ್ದಾರೆ.</p>.<p>28 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ 21 ಶಾಸಕರನ್ನು ಹೊಂದಿರುವ ಬಿಜೆಪಿಯನ್ನು ಸರ್ಕಾರ ರಚಿಸಲು ನಜ್ಮಾ ಅವರು ಆಹ್ವಾನಿಸಿದ್ದರು.</p>.<p>32 ಶಾಸಕರ ಬೆಂಬಲ ಇದೆ ಎಂದು ಹೇಳಿಕೊಂಡಿರುವ ಬಿಜೆಪಿ ಬಿರೇನ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿತ್ತು.<br /> ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲಾ ಅವರು ಪ್ರಮಾಣವಚನ ಬೋಧಿಸಿದರು. ನಿರ್ಗಮಿತ ಮುಖ್ಯಮಂತ್ರಿ ಓಕ್ರಮ್ ಇಬೋಬಿ ಸಿಂಗ್ ಹಾಜರಿದ್ದರು.</p>.<p>ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮತ್ತು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಕಾರ್ಯಕ್ರಮಕ್ಕೆ ಹಾಜರಾಬೇಕಿತ್ತು. ಆದರೆ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಕಾರಣ ವಿಮಾನ ಮತ್ತೆ ದೆಹಲಿಗೆ ಹಿಂದಿರುಗಿತು.</p>.<p><strong>ಫುಟ್ಬಾಲ್ ಮೈದಾನದಿಂದ ಮುಖ್ಯಮಂತ್ರಿ ಗಾದಿಗೆ<br /> (ಐಎಎನ್ಎಸ್): </strong>ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (56) ಅವರಿಗೆ ಫುಟ್ಬಾಲ್ ಎಂದರೆ ಬಹಳ ಪ್ರೀತಿ. ಬಾಲಕನಾಗಿದ್ದಾಗಲೇ ಫುಟ್ಬಾಲ್ನಲ್ಲಿ ತಮ್ಮ ಸಾಮರ್ಥ್ಯ ಸಾಬೀತುಮಾಡಿದ್ದ ಅವರು ನಂತರ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೇರಿಕೊಂಡರು.</p>.<p>ಡ್ಯುರಾಂಡ್ ಕಪ್ನಲ್ಲಿ ಬಿಎಸ್ಎಫ್ ಅನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದರು. ನಂತರ ಆ ಕೆಲಸಕ್ಕೆ ರಾಜೀನಾಮೆ ನೀಡಿ ಮಣಿಪುರಿ ಭಾಷೆಯಲ್ಲಿ ‘ನಹರೋಲ್ ಗಿ ಥೌಡಂಗ್’ ಎಂಬ ಹೆಸರಿನ ಪತ್ರಿಕೆ ಆರಂಭಿಸಿದರು. ಪತ್ರಿಕೆ ಬಹಳ ಜನಪ್ರಿಯವಾಯಿತು.</p>.<p>ದೇಶವಿರೋಧಿ ಲೇಖನಗಳನ್ನು ಪ್ರಕಟಿಸಿದ ಆರೋಪದಲ್ಲಿ 2000ನೇ ಇಸವಿಯ ಏಪ್ರಿಲ್ನಲ್ಲಿ ಅವರ ಪತ್ರಿಕಾ ಕಚೇರಿ ಮೇಲೆ ಪೊಲೀಸ್ ದಾಳಿ ನಡೆದಿತ್ತು. ತೀವ್ರವಾದಿಗಳಿಗೆ ಬೆಂಬಲ ನೀಡಿದ ಆಪಾದನೆ ಮೇಲೆ ಅವರನ್ನು ಬಂಧಿಸಲಾಯಿತು. ಹೀಗಾಗಿ ಅವರು ತಮ್ಮ ವೃತ್ತಿಯನ್ನೇ ಬದಲಾಯಿಸಿ ರಾಜಕಾರಣಿಯಾದರು.</p>.<p>‘ಜನ ಸೇವೆಗೆ ಬರಬೇಕು ಎಂಬ ನನ್ನೊಳಗಿನ ತುಡಿತ ಎಷ್ಟೊಂದು ಬಲವಾಗಿತ್ತೆಂದರೆ ಅಪಾರವಾಗಿ ಪ್ರೀತಿಸುತ್ತಿದ್ದ ಪತ್ರಿಕೋದ್ಯಮವನ್ನು<br /> ಬಿಟ್ಟು ರಾಜಕೀಯಕ್ಕೆ ಬಂದೆ’ ಎಂದು ಬಿರೇನ್ ಸಿಂಗ್ ಹೇಳುತ್ತಾರೆ.</p>.<p>2002ರಲ್ಲಿ ಡೆಮಾಕ್ರಟಿಕ್ ರೆವಲ್ಯೂಷನರಿ ಪೀಪಲ್ಸ್ ಪಾರ್ಟಿಯ ಟಿಕೆಟ್ನಿಂದ ವಿಧಾನಸಭೆಗೆ ಸ್ಪರ್ಧಿಸಿ ಗೆದ್ದರು. 2003ರಲ್ಲಿ ಕಾಂಗ್ರೆಸ್ ಸೇರಿ ಸಚಿವರಾದರು. ನಂತರದ ಎಲ್ಲ ಚುನಾವಣೆಗಳಲ್ಲಿ ಅವರು ತಮ್ಮ ಹೈನ್ಗಾಂಗ್ ಕ್ಷೇತ್ರವನ್ನು ಉಳಿಸಿಕೊಂಡರು.</p>.<p>ಹಲವು ಮಹತ್ವದ ಖಾತೆಗಳನ್ನು ನಿರ್ವಹಿಸಿದ್ದಲ್ಲದೆ ಸರ್ಕಾರದ ವಕ್ತಾರರೂ ಆಗಿದ್ದರು. ಓಕ್ರಮ್ ಇಬೋಬಿ ಅವರ ಸರ್ಕಾರ ಬಿಕ್ಕಟ್ಟುಗಳನ್ನು ಎದುರಿಸಿದಾಗಲೆಲ್ಲ ಅದರ ನಿವಾರಣೆಯ ಹೊಣೆಯೂ ಸಿಂಗ್ ಅವರದ್ದೇ ಆಗಿತ್ತು.</p>.<p>ಆದರೆ ಇಬೋಬಿ ಮತ್ತು ಬಿರೇನ್ ನಡುವಣ ಸಂಬಂಧ ಹಳಸಿತು. ಇಬೋಬಿ ಅವರನ್ನು ಕುರ್ಚಿಯಿಂದ ಕೆಳಗಿಳಿಸುವ ಅಭಿಯಾನಕ್ಕೆ ಬಿರೇನ್ ಅವರೇ ನಾಯಕರಾದರು. ಅದರಿಂದ ಸಿಟ್ಟುಗೊಂಡ ಇಬೋಬಿ, ಬಿರೇನ್ ಅವರನ್ನು ಸಂಪುಟದಿಂದ ಕೈಬಿಟ್ಟರು.</p>.<p>2016ರ ಅಕ್ಟೋಬರ್ನಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ಇತ್ತ ಬಿರೇನ್, ಬಿಜೆಪಿ ಸೇರಿದರು. ತಾವೆಂದೂ ಮುಖ್ಯಮಂತ್ರಿಯಾಗುವ ಕನಸು ಕಂಡಿರಲಿಲ್ಲ ಎಂದು ಹೇಳುವ ಬಿರೇನ್ ಮಣಿಪುರದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಮಣಿಪುರ ಮುಖ್ಯಮಂತ್ರಿಯಾಗಿ ಬಿಜೆಪಿಯ ಎನ್. ಬಿರೇನ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p>.<p>ಬಿಜೆಪಿ ಮತ್ತು ಮಿತ್ರ ಪಕ್ಷಗಳ ಎಂಟು ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.</p>.<p>ಬಿಜೆಪಿಗೆ ಈಗ ಬೆಂಬಲ ಸೂಚಿಸಿರುವ ಶಾಸಕರು ವಿಶ್ವಾಸಮತ ಸಂದರ್ಭದಲ್ಲಿ ಮನಸ್ಸು ಬದಲಿಸದಂತೆ ಸಚಿವ ಸ್ಥಾನಗಳನ್ನು ಹಂಚಲಾಗಿದೆ. ಎನ್ಪಿಪಿಯ ವೈ. ಜಾಯ್ಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ನಾಲ್ವರು ಸದಸ್ಯರನ್ನು ಹೊಂದಿರುವ ಎನ್ಪಿಪಿಯ ಎನ್. ಕಯಿಸಿ ಅವರನ್ನೂ ಸಚಿವರನ್ನಾಗಿ ಮಾಡಲಾಗಿದೆ.</p>.<p>ನಾಲ್ವರು ಶಾಸಕರನ್ನು ಹೊಂದಿರುವ ನಾಗಾ ಪೀಪಲ್ಸ್ ಫ್ರಂಟ್ನ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ. ಎಲ್ಜೆಪಿಯ ಏಕೈಕ ಶಾಸಕ ಕರಮ್ ಶ್ಯಾಮ್ ಅವರಿಗೂ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿರುವ ಟಿ. ಶ್ಯಾಮಕುಮಾರ್ ಅವರೂ ಸಚಿವರಾಗಿದ್ದಾರೆ.</p>.<p>28 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ 21 ಶಾಸಕರನ್ನು ಹೊಂದಿರುವ ಬಿಜೆಪಿಯನ್ನು ಸರ್ಕಾರ ರಚಿಸಲು ನಜ್ಮಾ ಅವರು ಆಹ್ವಾನಿಸಿದ್ದರು.</p>.<p>32 ಶಾಸಕರ ಬೆಂಬಲ ಇದೆ ಎಂದು ಹೇಳಿಕೊಂಡಿರುವ ಬಿಜೆಪಿ ಬಿರೇನ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿತ್ತು.<br /> ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲಾ ಅವರು ಪ್ರಮಾಣವಚನ ಬೋಧಿಸಿದರು. ನಿರ್ಗಮಿತ ಮುಖ್ಯಮಂತ್ರಿ ಓಕ್ರಮ್ ಇಬೋಬಿ ಸಿಂಗ್ ಹಾಜರಿದ್ದರು.</p>.<p>ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮತ್ತು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಕಾರ್ಯಕ್ರಮಕ್ಕೆ ಹಾಜರಾಬೇಕಿತ್ತು. ಆದರೆ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಕಾರಣ ವಿಮಾನ ಮತ್ತೆ ದೆಹಲಿಗೆ ಹಿಂದಿರುಗಿತು.</p>.<p><strong>ಫುಟ್ಬಾಲ್ ಮೈದಾನದಿಂದ ಮುಖ್ಯಮಂತ್ರಿ ಗಾದಿಗೆ<br /> (ಐಎಎನ್ಎಸ್): </strong>ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (56) ಅವರಿಗೆ ಫುಟ್ಬಾಲ್ ಎಂದರೆ ಬಹಳ ಪ್ರೀತಿ. ಬಾಲಕನಾಗಿದ್ದಾಗಲೇ ಫುಟ್ಬಾಲ್ನಲ್ಲಿ ತಮ್ಮ ಸಾಮರ್ಥ್ಯ ಸಾಬೀತುಮಾಡಿದ್ದ ಅವರು ನಂತರ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೇರಿಕೊಂಡರು.</p>.<p>ಡ್ಯುರಾಂಡ್ ಕಪ್ನಲ್ಲಿ ಬಿಎಸ್ಎಫ್ ಅನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದರು. ನಂತರ ಆ ಕೆಲಸಕ್ಕೆ ರಾಜೀನಾಮೆ ನೀಡಿ ಮಣಿಪುರಿ ಭಾಷೆಯಲ್ಲಿ ‘ನಹರೋಲ್ ಗಿ ಥೌಡಂಗ್’ ಎಂಬ ಹೆಸರಿನ ಪತ್ರಿಕೆ ಆರಂಭಿಸಿದರು. ಪತ್ರಿಕೆ ಬಹಳ ಜನಪ್ರಿಯವಾಯಿತು.</p>.<p>ದೇಶವಿರೋಧಿ ಲೇಖನಗಳನ್ನು ಪ್ರಕಟಿಸಿದ ಆರೋಪದಲ್ಲಿ 2000ನೇ ಇಸವಿಯ ಏಪ್ರಿಲ್ನಲ್ಲಿ ಅವರ ಪತ್ರಿಕಾ ಕಚೇರಿ ಮೇಲೆ ಪೊಲೀಸ್ ದಾಳಿ ನಡೆದಿತ್ತು. ತೀವ್ರವಾದಿಗಳಿಗೆ ಬೆಂಬಲ ನೀಡಿದ ಆಪಾದನೆ ಮೇಲೆ ಅವರನ್ನು ಬಂಧಿಸಲಾಯಿತು. ಹೀಗಾಗಿ ಅವರು ತಮ್ಮ ವೃತ್ತಿಯನ್ನೇ ಬದಲಾಯಿಸಿ ರಾಜಕಾರಣಿಯಾದರು.</p>.<p>‘ಜನ ಸೇವೆಗೆ ಬರಬೇಕು ಎಂಬ ನನ್ನೊಳಗಿನ ತುಡಿತ ಎಷ್ಟೊಂದು ಬಲವಾಗಿತ್ತೆಂದರೆ ಅಪಾರವಾಗಿ ಪ್ರೀತಿಸುತ್ತಿದ್ದ ಪತ್ರಿಕೋದ್ಯಮವನ್ನು<br /> ಬಿಟ್ಟು ರಾಜಕೀಯಕ್ಕೆ ಬಂದೆ’ ಎಂದು ಬಿರೇನ್ ಸಿಂಗ್ ಹೇಳುತ್ತಾರೆ.</p>.<p>2002ರಲ್ಲಿ ಡೆಮಾಕ್ರಟಿಕ್ ರೆವಲ್ಯೂಷನರಿ ಪೀಪಲ್ಸ್ ಪಾರ್ಟಿಯ ಟಿಕೆಟ್ನಿಂದ ವಿಧಾನಸಭೆಗೆ ಸ್ಪರ್ಧಿಸಿ ಗೆದ್ದರು. 2003ರಲ್ಲಿ ಕಾಂಗ್ರೆಸ್ ಸೇರಿ ಸಚಿವರಾದರು. ನಂತರದ ಎಲ್ಲ ಚುನಾವಣೆಗಳಲ್ಲಿ ಅವರು ತಮ್ಮ ಹೈನ್ಗಾಂಗ್ ಕ್ಷೇತ್ರವನ್ನು ಉಳಿಸಿಕೊಂಡರು.</p>.<p>ಹಲವು ಮಹತ್ವದ ಖಾತೆಗಳನ್ನು ನಿರ್ವಹಿಸಿದ್ದಲ್ಲದೆ ಸರ್ಕಾರದ ವಕ್ತಾರರೂ ಆಗಿದ್ದರು. ಓಕ್ರಮ್ ಇಬೋಬಿ ಅವರ ಸರ್ಕಾರ ಬಿಕ್ಕಟ್ಟುಗಳನ್ನು ಎದುರಿಸಿದಾಗಲೆಲ್ಲ ಅದರ ನಿವಾರಣೆಯ ಹೊಣೆಯೂ ಸಿಂಗ್ ಅವರದ್ದೇ ಆಗಿತ್ತು.</p>.<p>ಆದರೆ ಇಬೋಬಿ ಮತ್ತು ಬಿರೇನ್ ನಡುವಣ ಸಂಬಂಧ ಹಳಸಿತು. ಇಬೋಬಿ ಅವರನ್ನು ಕುರ್ಚಿಯಿಂದ ಕೆಳಗಿಳಿಸುವ ಅಭಿಯಾನಕ್ಕೆ ಬಿರೇನ್ ಅವರೇ ನಾಯಕರಾದರು. ಅದರಿಂದ ಸಿಟ್ಟುಗೊಂಡ ಇಬೋಬಿ, ಬಿರೇನ್ ಅವರನ್ನು ಸಂಪುಟದಿಂದ ಕೈಬಿಟ್ಟರು.</p>.<p>2016ರ ಅಕ್ಟೋಬರ್ನಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ಇತ್ತ ಬಿರೇನ್, ಬಿಜೆಪಿ ಸೇರಿದರು. ತಾವೆಂದೂ ಮುಖ್ಯಮಂತ್ರಿಯಾಗುವ ಕನಸು ಕಂಡಿರಲಿಲ್ಲ ಎಂದು ಹೇಳುವ ಬಿರೇನ್ ಮಣಿಪುರದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>