<p><strong>ಲಾಹೋರ್:</strong> ಒಂದೇ ಕುಟುಂಬದ ಆರು ಸದಸ್ಯರು ಸೇರಿದಂತೆ 20 ಮಂದಿ ಮೇಲೆ ಲಾಠಿ ಮತ್ತು ಚೂರಿಯಿಂದ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ದಾರುಣ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗ್ರಾಮವೊಂದರಲ್ಲಿ ನಡೆದಿದೆ.</p>.<p>ಸರ್ಗೋಧಾ ಜಿಲ್ಲೆಯ ದರ್ಗಾವೊಂದರಲ್ಲಿ ಶನಿವಾರ ಮಧ್ಯರಾತ್ರಿ ಈ ಕೃತ್ಯ ಎಸಗಲಾಗಿದೆ ಎಂದು ಅಲ್ಲಿನ ಪೊಲೀಸ್ ಉಪ ಆಯುಕ್ತ ಲಿಯಾಖತ್ ಅಲಿ ಛಟ್ಟಾ ತಿಳಿಸಿದ್ದಾರೆ.</p>.<p>ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ದರ್ಗಾದ ಪಾಲಕ ಅಬ್ದುಲ್ ವಹೀದ್ ಮತ್ತು ಆತನ ಸಹಚರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.</p>.<p>ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದ ಸ್ಥಳೀಯ ಧಾರ್ಮಿಕ ಮುಖಂಡ ಅಲಿ ಮೊಹಮ್ಮದ್ ಗುಜ್ಜರ್ ಅವರ ಸ್ಮರಣಾರ್ಥ ದರ್ಗಾವನ್ನು ನಿರ್ಮಿಸಲಾಗಿತ್ತು. ಅದರ ಉಸ್ತುವಾರಿಯನ್ನು ಅಬ್ದುಲ್ ವಹೀದ್ ವಹಿಸಿಕೊಂಡಿದ್ದ.</p>.<p>`ಇಲ್ಲಿ ಭೇಟಿ ನೀಡಿದರೆ ಪಾಪಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವ ನಂಬಿಕೆ ಭಕ್ತರದ್ದು.</p>.<p><strong>ನಡೆದಿದ್ದೇನು?: </strong>ಘಟನೆ ನಡೆದ ದಿನ ಭಕ್ತರಿಗೆ ದೂರವಾಣಿ ಕರೆ ಮಾಡಿ ದರ್ಗಾಕ್ಕೆ ಬರುವಂತೆ ವಹೀದ್ ಹೇಳಿದ್ದ. ದರ್ಗಾಕ್ಕೆ ಬಂದವರಿಗೆ ಅಮಲು ಪದಾರ್ಥ ನೀಡಿ, ನಂತರ ಅವರನ್ನು ವಿವಸ್ತ್ರಗೊಳಿಸಿ ಒಟ್ಟಿಗೆ ಕಟ್ಟಿಹಾಕಿ ಈ ಕೃತ್ಯ ಎಸಗಿದ್ದಾನೆ. ಈ ವೇಳೆ, ಇಬ್ಬರು ಮಹಿಳೆಯರು ಮತ್ತು ಪುರುಷರು ತಪ್ಪಿಸಿಕೊಂಡಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ತಪ್ಪಿಸಿಕೊಂಡವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ತನ್ನ ಧಾರ್ಮಿಕ ಮುಖಂಡ ಅಲಿ ಮುಹಮ್ಮದ್ ಅವರಿಗೆ ಎರಡು ವರ್ಷಗಳ ಹಿಂದೆ ವಿಷ ನೀಡಿ ಕೊಲೆ ಮಾಡಿದ್ದಕ್ಕೆ ಇವರನ್ನು ಹತ್ಯೆ ಮಾಡಿದ್ದೇನೆ. ತಾನವರನ್ನು ಕೊಲ್ಲದಿದ್ದರೆ ಅವರು ನನಗೂ ವಿಷ ನೀಡುತ್ತಿದ್ದರು’ ಎಂದು ವಹೀದ್ ಹೇಳಿರುವುದಾಗಿ ಛಟ್ಟಾ ತಿಳಿಸಿದ್ದಾರೆ.</p>.<p>‘ಘಟನೆಯಲ್ಲಿ ಇನ್ನೂ ಹಲವರ ಕೈವಾಡ ಇರುವ ಬಗ್ಗೆ ಶಂಕಿಸಲಾಗಿದೆ. ಪ್ರಮುಖ ಶಂಕಿತ ಲಾಹೋರ್ನ ನಿವಾಸಿಯಾಗಿದ್ದು, ಪಾಕಿಸ್ತಾನದ ಚುನಾವಣಾ ಆಯೋಗದ ಉದ್ಯೋಗಿ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಐವರನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ತಿಳಿಸಿದ್ದಾರೆ.</p>.<p>ಘಟನೆ ಬಗ್ಗೆ 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರೀಕ್ಷಕರಿಗೆ ಪಂಜಾಬ್ ಮುಖ್ಯಮಂತ್ರಿ ಶೆಹ್ಬಾಜ್ ಷರೀಫ್ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್:</strong> ಒಂದೇ ಕುಟುಂಬದ ಆರು ಸದಸ್ಯರು ಸೇರಿದಂತೆ 20 ಮಂದಿ ಮೇಲೆ ಲಾಠಿ ಮತ್ತು ಚೂರಿಯಿಂದ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ದಾರುಣ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗ್ರಾಮವೊಂದರಲ್ಲಿ ನಡೆದಿದೆ.</p>.<p>ಸರ್ಗೋಧಾ ಜಿಲ್ಲೆಯ ದರ್ಗಾವೊಂದರಲ್ಲಿ ಶನಿವಾರ ಮಧ್ಯರಾತ್ರಿ ಈ ಕೃತ್ಯ ಎಸಗಲಾಗಿದೆ ಎಂದು ಅಲ್ಲಿನ ಪೊಲೀಸ್ ಉಪ ಆಯುಕ್ತ ಲಿಯಾಖತ್ ಅಲಿ ಛಟ್ಟಾ ತಿಳಿಸಿದ್ದಾರೆ.</p>.<p>ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ದರ್ಗಾದ ಪಾಲಕ ಅಬ್ದುಲ್ ವಹೀದ್ ಮತ್ತು ಆತನ ಸಹಚರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.</p>.<p>ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದ ಸ್ಥಳೀಯ ಧಾರ್ಮಿಕ ಮುಖಂಡ ಅಲಿ ಮೊಹಮ್ಮದ್ ಗುಜ್ಜರ್ ಅವರ ಸ್ಮರಣಾರ್ಥ ದರ್ಗಾವನ್ನು ನಿರ್ಮಿಸಲಾಗಿತ್ತು. ಅದರ ಉಸ್ತುವಾರಿಯನ್ನು ಅಬ್ದುಲ್ ವಹೀದ್ ವಹಿಸಿಕೊಂಡಿದ್ದ.</p>.<p>`ಇಲ್ಲಿ ಭೇಟಿ ನೀಡಿದರೆ ಪಾಪಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವ ನಂಬಿಕೆ ಭಕ್ತರದ್ದು.</p>.<p><strong>ನಡೆದಿದ್ದೇನು?: </strong>ಘಟನೆ ನಡೆದ ದಿನ ಭಕ್ತರಿಗೆ ದೂರವಾಣಿ ಕರೆ ಮಾಡಿ ದರ್ಗಾಕ್ಕೆ ಬರುವಂತೆ ವಹೀದ್ ಹೇಳಿದ್ದ. ದರ್ಗಾಕ್ಕೆ ಬಂದವರಿಗೆ ಅಮಲು ಪದಾರ್ಥ ನೀಡಿ, ನಂತರ ಅವರನ್ನು ವಿವಸ್ತ್ರಗೊಳಿಸಿ ಒಟ್ಟಿಗೆ ಕಟ್ಟಿಹಾಕಿ ಈ ಕೃತ್ಯ ಎಸಗಿದ್ದಾನೆ. ಈ ವೇಳೆ, ಇಬ್ಬರು ಮಹಿಳೆಯರು ಮತ್ತು ಪುರುಷರು ತಪ್ಪಿಸಿಕೊಂಡಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ತಪ್ಪಿಸಿಕೊಂಡವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ತನ್ನ ಧಾರ್ಮಿಕ ಮುಖಂಡ ಅಲಿ ಮುಹಮ್ಮದ್ ಅವರಿಗೆ ಎರಡು ವರ್ಷಗಳ ಹಿಂದೆ ವಿಷ ನೀಡಿ ಕೊಲೆ ಮಾಡಿದ್ದಕ್ಕೆ ಇವರನ್ನು ಹತ್ಯೆ ಮಾಡಿದ್ದೇನೆ. ತಾನವರನ್ನು ಕೊಲ್ಲದಿದ್ದರೆ ಅವರು ನನಗೂ ವಿಷ ನೀಡುತ್ತಿದ್ದರು’ ಎಂದು ವಹೀದ್ ಹೇಳಿರುವುದಾಗಿ ಛಟ್ಟಾ ತಿಳಿಸಿದ್ದಾರೆ.</p>.<p>‘ಘಟನೆಯಲ್ಲಿ ಇನ್ನೂ ಹಲವರ ಕೈವಾಡ ಇರುವ ಬಗ್ಗೆ ಶಂಕಿಸಲಾಗಿದೆ. ಪ್ರಮುಖ ಶಂಕಿತ ಲಾಹೋರ್ನ ನಿವಾಸಿಯಾಗಿದ್ದು, ಪಾಕಿಸ್ತಾನದ ಚುನಾವಣಾ ಆಯೋಗದ ಉದ್ಯೋಗಿ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಐವರನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ತಿಳಿಸಿದ್ದಾರೆ.</p>.<p>ಘಟನೆ ಬಗ್ಗೆ 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರೀಕ್ಷಕರಿಗೆ ಪಂಜಾಬ್ ಮುಖ್ಯಮಂತ್ರಿ ಶೆಹ್ಬಾಜ್ ಷರೀಫ್ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>