ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರು ತಡೆದ ಲಾರಿಗೆ ಕಾರು ಡಿಕ್ಕಿ: ಚಾಲಕನಿಗೆ ಗಾಯ

Last Updated 9 ಏಪ್ರಿಲ್ 2017, 20:05 IST
ಅಕ್ಷರ ಗಾತ್ರ
ಬೆಂಗಳೂರು: ಕೆ.ಆರ್‌.ಪುರ ಸಮೀಪದ ಅವಲಹಳ್ಳಿ ಬಳಿ ಭಾನುವಾರ ರಾತ್ರಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಚಾಲಕ ಮಧು (28) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. 
 
‘ಹೊಸಕೋಟೆಯಿಂದ ನಗರಕ್ಕೆ ಬರುತ್ತಿದ್ದ ಲಾರಿಗೆ ಚೀಮಸಂದ್ರದ ಬಳಿ  ಕೈ ಮಾಡಿದ್ದ ಸಂಚಾರ ಕಾನ್‌ಸ್ಟೆಬಲ್‌, ನಿಲ್ಲಿಸುವಂತೆ ಸೂಚಿಸಿದ್ದರು. ಆಗ  ಚಾಲಕ ವಸಂತರಾವ್‌, ಲಾರಿಯನ್ನು ರಸ್ತೆ ಮಧ್ಯೆಯೇ ನಿಲ್ಲಿಸಿದ್ದರು.’
 
‘ಅದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಚಾಲಕ ಮಧು ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಅವರನ್ನು ಸ್ಥಳೀಯರೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.
 
ರಸ್ತೆ ಮಧ್ಯೆಯೇ ವಾಹನ ತಪಾಸಣೆ: ‘ಚೀಮಸಂದ್ರದ ಬಳಿ ರಸ್ತೆ ಮಧ್ಯೆಯೇ ನಿಂತು ಸಂಚಾರ ಪೊಲೀಸರು, ವಾಹನಗಳ ತಪಾಸಣೆ ನಡೆಸುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ’ ಎಂದು ಸ್ಥಳೀಯರು ದೂರಿದರು.
 
‘ಪ್ರತಿದಿನವೂ ಸಾವಿರಾರೂ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ವೇಗವಾಗಿ ಹೋಗುವ ವಾಹನಗಳನ್ನು ಏಕಾಏಕಿ ನಿಲ್ಲಿಸಿದರೆ, ಹಿಂದಿನಿಂದ ಬರುವ ವಾಹನಗಳಿಗೆ ತೊಂದರೆಯಾಗುತ್ತಿದೆ’ ಎಂದು ಅವರು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT