ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಬಂಗ್ಲೆ ಇರುವ ಗುಡ್ಡದ ಕಡೆಯಿಂದ ಬಂದ ಸುಮಾರು 3 ವರ್ಷದ ಹೆಣ್ಣು ಕಡವೆಯನ್ನು ಬೀದಿನಾಯಿಗಳು ಬೆನ್ನಟ್ಟಿದವು. ದಿಕ್ಕುತೋಚದೇ ಓಡಿಬಂದ ಅದು ಸಮುದ್ರಕ್ಕೆ ಇಳಿಯಿತು. ಕಡವೆ ಈಜುವುದನ್ನು ನೋಡಿದ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ವಲಯ ಅರಣ್ಯಾಧಿಕಾರಿ ಕೆ.ಡಿ. ನಾಯ್ಕ ಹಾಗೂ ಸಿಬ್ಬಂದಿ ಸುಮಾರು ಅರ್ಧ ತಾಸು ಕಾರ್ಯಾಚರಣೆ ನಡೆಸಿ ಅದನ್ನು ರಕ್ಷಿಸಿದರು.ಈ ವೇಳೆ ಸಣ್ಣಪುಟ್ಟ ಗಾಯಗಳಾಗಿದ್ದ ಕಡವೆಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.