<div> <strong>ಶ್ರೀನಗರ :</strong> ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯಶಾಲಿ ಆಗಿದ್ದಾರೆ.<br /> <div> ಫಾರೂಕ್ ಅವರು ತಮ್ಮ ಪ್ರತಿಸ್ಪರ್ಧಿ ಪಿಡಿಪಿ ಅಭ್ಯರ್ಥಿ ನಜೀರ್ ಖಾನ್ ಅವರನ್ನು 10,700 ಮತಗಳ ಅಂತರದಿಂದ ಸೋಲಿಸಿದ್ದಾರೆ.</div><div> </div><div> ಭಾರಿ ಹಿಂಸಾಚಾರ, ಸಾವು ನೋವುಗಳ ಮಧ್ಯೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆದಿತ್ತು. ಆಗ ಶೇಕಡ 7.13ರಷ್ಟು ಮತದಾನ ಆಗಿತ್ತು.</div><div> ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಇಷ್ಟು ಕಡಿಮೆ ಮತದಾನ ಆಗಿರುವುದು ಚುನಾವಣಾ ಇತಿಹಾಸದಲ್ಲಿ ಇದೇ ಮೊದಲು.</div><div> </div><div> ಹಿಂಸಾಚಾರ ನಡೆದ ಪ್ರದೇಶಗಳ 38 ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವು ಏಪ್ರಿಲ್ 13ರಂದು ಮರು ಮತದಾನ ನಡೆಸಿತ್ತು. ಆಗ ಶೇ 2 ರಷ್ಟು ಜನರು ಮತ ಚಲಾಯಿಸಿದ್ದರು.</div><div> </div><div> ಫಾರೂಕ್ ಅವರು ಮೂರನೇ ಬಾರಿಗೆ ಲೋಕಸಭೆಯನ್ನು ಪ್ರವೇಶಿಸು ತ್ತಿದ್ದು, ಆಡಳಿತಾರೂಢ ಪಿಡಿಪಿಗೆ ಈ ಚುನಾವಣೆಯ ಸೋಲಿನಿಂದ ಮುಖಭಂಗವಾಗಿದೆ.</div><div> </div><div> ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ: ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಲೇ ಫಾರೂಕ್ ಅಬ್ದುಲ್ಲಾ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> <strong>ಶ್ರೀನಗರ :</strong> ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯಶಾಲಿ ಆಗಿದ್ದಾರೆ.<br /> <div> ಫಾರೂಕ್ ಅವರು ತಮ್ಮ ಪ್ರತಿಸ್ಪರ್ಧಿ ಪಿಡಿಪಿ ಅಭ್ಯರ್ಥಿ ನಜೀರ್ ಖಾನ್ ಅವರನ್ನು 10,700 ಮತಗಳ ಅಂತರದಿಂದ ಸೋಲಿಸಿದ್ದಾರೆ.</div><div> </div><div> ಭಾರಿ ಹಿಂಸಾಚಾರ, ಸಾವು ನೋವುಗಳ ಮಧ್ಯೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆದಿತ್ತು. ಆಗ ಶೇಕಡ 7.13ರಷ್ಟು ಮತದಾನ ಆಗಿತ್ತು.</div><div> ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಇಷ್ಟು ಕಡಿಮೆ ಮತದಾನ ಆಗಿರುವುದು ಚುನಾವಣಾ ಇತಿಹಾಸದಲ್ಲಿ ಇದೇ ಮೊದಲು.</div><div> </div><div> ಹಿಂಸಾಚಾರ ನಡೆದ ಪ್ರದೇಶಗಳ 38 ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವು ಏಪ್ರಿಲ್ 13ರಂದು ಮರು ಮತದಾನ ನಡೆಸಿತ್ತು. ಆಗ ಶೇ 2 ರಷ್ಟು ಜನರು ಮತ ಚಲಾಯಿಸಿದ್ದರು.</div><div> </div><div> ಫಾರೂಕ್ ಅವರು ಮೂರನೇ ಬಾರಿಗೆ ಲೋಕಸಭೆಯನ್ನು ಪ್ರವೇಶಿಸು ತ್ತಿದ್ದು, ಆಡಳಿತಾರೂಢ ಪಿಡಿಪಿಗೆ ಈ ಚುನಾವಣೆಯ ಸೋಲಿನಿಂದ ಮುಖಭಂಗವಾಗಿದೆ.</div><div> </div><div> ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ: ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಲೇ ಫಾರೂಕ್ ಅಬ್ದುಲ್ಲಾ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>