ಸ್ಕಾಟ್ಲ್ಯಾಂಡ್ ಯಾರ್ಡ್ ಪೊಲೀಸರು ವಿಜಯ್ಮಲ್ಯ ಅವರನ್ನು ಬಂಧಿಸಿದ್ದಾರೆ. ಅವರನ್ನು ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರುಪಡಿಸಿದ ನಂತರ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಗಳಿವೆ.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಅಧಿಕೃತವಾಗಿ ಮನವಿ ಮಾಡಿತ್ತು. ಭಾರತ–ಬ್ರಿಟನ್ ನಡುವಣ ಪರಸ್ಪರ ಕಾನೂನು ನೆರವು ಒಪ್ಪಂದದ ಅಡಿಯಲ್ಲಿ ಮಲ್ಯ ಅವರನ್ನು ಹಸ್ತಾಂತರಿಸಲಾಗುವುದು.
9 ಸಾವಿರ ಕೋಟಿ (ಅಂದಾಜಿಸಿರುವಂತೆ)ರೂಪಾಯಿ ಸಾಲ ಮಾಡಿಕೊಂಡು ಉದ್ಯಮಿ ವಿಜಯ್ ಮಲ್ಯ ಅವರು ದೇಶದಿಂದ ಪಲಾಯನಗೊಂಡಿದ್ದರು. ವಿಜಯ್ ಮಲ್ಯ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಕೋರ್ಟ್ಗಳಿಂದ ಹಲವು ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.