<p><strong>ಕೊಪ್ಪಳ: </strong>ಸಂಗೀತಕ್ಕೆ ನೋವು ಮರೆಸುವ ಶಕ್ತಿ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ ಹೇಳಿದರು.<br /> ನಗರದ ಗವಿಶ್ರೀ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸೇವಾ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ನಡೆದ ಗಾನಸುಧೆ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಅನೇಕ ಸಂಗೀತ ಪ್ರತಿಭೆಗಳಿವೆ. ಅಂಥ ಪ್ರತಿಭೆಗಳಿಗೆ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಹೆಚ್ಚಿನ ಪ್ರತಿಭೆಗಳನ್ನು ಹೊರತರಬೇಕಿದೆ. ಆ ಮೂಲಕ ಜಿಲ್ಲೆಯಲ್ಲಿ ಸಂಗೀತ ಕ್ಷೇತ್ರವನ್ನು ಇನ್ನಷ್ಟು ವಿಸ್ತರಿಸಬೇಕಿದೆ. ಸಂಗೀತ ಸಾಧನೆಯ ಬಗ್ಗೆ ಮಾಹಿತಿ ನೀಡಬೇಕು.</p>.<p>ಬೇರೆಯವರ ಕಲೆಯ ಜತೆಗೆ ನಮ್ಮ ಸ್ವಂತಿಕೆಯನ್ನೂ ಬೆಳೆಸಿಕೊಳ್ಳಬೇಕು. ಈ ಕಲೆಗೆ ಯಾವುದೇ ವಯೋಬೇಧ ಇಲ್ಲ’ ಎಂದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಪ್ರಕಾಶಗೌಡ ಎಸ್.ಯು.ಮಾತನಾಡಿ, ‘ಬಹುತೇಕ ಮಕ್ಕಳು ಟಿವಿ, ಮೊಬೈಲ್ನಂಥ ವಸ್ತುಗಳ ಮೇಲೆ ವ್ಯಾಮೋಹ ಹೊಂದಿದ್ದಾರೆ. ಅಂಥವರಲ್ಲಿ ಸಂಗೀತದ ಆಸಕ್ತಿ ಬೆಳೆಸಬೇಕು’ ಎಂದರು.</p>.<p>‘ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಹೊಂದಿದೆ. ಇಲ್ಲಿ ಸುಮಾರು 500 ಸಂಗೀತಗಾರರಿದ್ದಾರೆ. ಅವರೆಲ್ಲಾ ಹಲವು ವೃತ್ತಿಗಳಲ್ಲಿದ್ದರೂ ಪ್ರವೃತ್ತಿಯಲ್ಲಿ ಸಂಗೀತಗಾರರು. ಇಂಥ ಪ್ರತಿಭೆಗಳ ಸಂಖ್ಯೆ ಇನ್ನೂ ಹೆಚ್ಚಲಿ’ ಎಂದರು.</p>.<p>ಬಿ.ಪಿ.ಮರಿಗೌಡರ್ ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಸದಸ್ಯ ಪ್ರಾಣೇಶ ಮಹೇಂದ್ರಕರ್, ಎನ್.ಆರ್.ಕಬಾಡಿ ಇದ್ದರು. ಮಾರುತಿ ಚಿತ್ರಗಾರ, ಪ್ರಭಾಕರ ಪಟವಾರಿ, ಅನಂತ ಪಾವಣಸ್ಕರ್, ಶ್ರೀಶೈಲ ಬಡಿಗೇರ, ವಸಂತರಾವ್ ಪಟವಾರಿ, ಗುರುರಾಜ ಕುಲಕರ್ಣಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸಂಗೀತಕ್ಕೆ ನೋವು ಮರೆಸುವ ಶಕ್ತಿ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ ಹೇಳಿದರು.<br /> ನಗರದ ಗವಿಶ್ರೀ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸೇವಾ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ನಡೆದ ಗಾನಸುಧೆ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಅನೇಕ ಸಂಗೀತ ಪ್ರತಿಭೆಗಳಿವೆ. ಅಂಥ ಪ್ರತಿಭೆಗಳಿಗೆ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಹೆಚ್ಚಿನ ಪ್ರತಿಭೆಗಳನ್ನು ಹೊರತರಬೇಕಿದೆ. ಆ ಮೂಲಕ ಜಿಲ್ಲೆಯಲ್ಲಿ ಸಂಗೀತ ಕ್ಷೇತ್ರವನ್ನು ಇನ್ನಷ್ಟು ವಿಸ್ತರಿಸಬೇಕಿದೆ. ಸಂಗೀತ ಸಾಧನೆಯ ಬಗ್ಗೆ ಮಾಹಿತಿ ನೀಡಬೇಕು.</p>.<p>ಬೇರೆಯವರ ಕಲೆಯ ಜತೆಗೆ ನಮ್ಮ ಸ್ವಂತಿಕೆಯನ್ನೂ ಬೆಳೆಸಿಕೊಳ್ಳಬೇಕು. ಈ ಕಲೆಗೆ ಯಾವುದೇ ವಯೋಬೇಧ ಇಲ್ಲ’ ಎಂದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಪ್ರಕಾಶಗೌಡ ಎಸ್.ಯು.ಮಾತನಾಡಿ, ‘ಬಹುತೇಕ ಮಕ್ಕಳು ಟಿವಿ, ಮೊಬೈಲ್ನಂಥ ವಸ್ತುಗಳ ಮೇಲೆ ವ್ಯಾಮೋಹ ಹೊಂದಿದ್ದಾರೆ. ಅಂಥವರಲ್ಲಿ ಸಂಗೀತದ ಆಸಕ್ತಿ ಬೆಳೆಸಬೇಕು’ ಎಂದರು.</p>.<p>‘ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಹೊಂದಿದೆ. ಇಲ್ಲಿ ಸುಮಾರು 500 ಸಂಗೀತಗಾರರಿದ್ದಾರೆ. ಅವರೆಲ್ಲಾ ಹಲವು ವೃತ್ತಿಗಳಲ್ಲಿದ್ದರೂ ಪ್ರವೃತ್ತಿಯಲ್ಲಿ ಸಂಗೀತಗಾರರು. ಇಂಥ ಪ್ರತಿಭೆಗಳ ಸಂಖ್ಯೆ ಇನ್ನೂ ಹೆಚ್ಚಲಿ’ ಎಂದರು.</p>.<p>ಬಿ.ಪಿ.ಮರಿಗೌಡರ್ ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಸದಸ್ಯ ಪ್ರಾಣೇಶ ಮಹೇಂದ್ರಕರ್, ಎನ್.ಆರ್.ಕಬಾಡಿ ಇದ್ದರು. ಮಾರುತಿ ಚಿತ್ರಗಾರ, ಪ್ರಭಾಕರ ಪಟವಾರಿ, ಅನಂತ ಪಾವಣಸ್ಕರ್, ಶ್ರೀಶೈಲ ಬಡಿಗೇರ, ವಸಂತರಾವ್ ಪಟವಾರಿ, ಗುರುರಾಜ ಕುಲಕರ್ಣಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>