ಬೆಂಗಳೂರು: ಪೆರೋಲ್ ಮೇಲೆ ತೆರಳಿ ಪುನಃ ಜೈಲಿಗೆ ಶರಣಾಗದೆ ನಾಪತ್ತೆಯಾಗಿರುವ ಕೈದಿಗಳ ಪತ್ತೆ ಕಾರ್ಯಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಥವಾ ಪೊಲೀಸ್ ಮಹಾ ನಿರೀಕ್ಷಕರ (ಐಜಿಪಿ) ಮೇಲುಸ್ತುವಾರಿಯಲ್ಲಿ ವಿಶೇಷ ತಂಡ ರಚಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿಪಿ) ಹೈಕೋರ್ಟ್ ನಿರ್ದೇಶಿಸಿದೆ.