ತಿರುವನಂತಪುರ: ನೈರುತ್ಯ ಮುಂಗಾರು ಚುರುಕಾಗಿದ್ದು, ಶುಕ್ರವಾರ ಕೇರಳ ರಾಜ್ಯದಾದ್ಯಂತ ಹಾಗೂ ಲಕ್ಷದ್ವೀಪದಲ್ಲಿ ಧಾರಾಕಾರ ಮಳೆ ಬಿದ್ದಿದೆ.
ಕೊಯಿಕೋಡ್ನ ವಡಗರದಲ್ಲಿ ಅತಿ ಹೆಚ್ಚು 8 ಸೆಂ.ಮೀ., ಅಲಪುಳದ ಮಾವೆಲಿಕರ ಮತ್ತು ಲಕ್ಷದ್ವೀಪದ ಮಿನಿಕೊಯ್ನಲ್ಲಿ 7 ಸೆಂ.ಮೀ. ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ 4ರ ವರೆಗೆ ಕೇರಳ ಮತ್ತು ಲಕ್ಷದ್ವೀಪದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ
ಶುಕ್ರವಾರ ಮಧ್ಯಾಹ್ನ 2ರಿಂದ ಮುಂದಿನ 24 ಗಂಟೆಗಳ ವರೆಗೆ ಪಶ್ಚಿಮ ದಿಕ್ಕಿನಿಂದ ಪ್ರತಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಪ್ರಬಲ ಬಿರುಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಕೇರಳದ ಕರಾವಳಿ ತೀರದ ಮೀನುಗಾರಿರಿಗೆ ಎಚ್ಚರಿಕೆ ನೀಡಲಾಗಿದೆ.