ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೀರಾವರಿ ನಿಗಮದ ವತಿಯಿಂದ ₹20 ಲಕ್ಷ ಖರ್ಚು ಮಾಡಿ ಪರ್ಜನ್ಯ ಹೋಮ ಮಾಡಲಾಗುತ್ತಿದೆ. ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತಮ್ಮ ಕೈಯಿಂದ ಹಣ ಖರ್ಚು ಮಾಡಿ ಈ ಹೋಮ ಮಾಡಿದರೆ ನಮ್ಮ ತಕರಾರಿಲ್ಲ. ಅದು ಅವರ ವೈಯಕ್ತಿಕ ನಂಬಿಕೆ ಎನಿಸಿಕೊಳ್ಳುತ್ತದೆ. ಆದರೆ, ಸರ್ಕಾರದ ದುಡ್ಡಿನಲ್ಲಿ ಇಂತಹ ಕಾರ್ಯಕ್ರಮ ಮಾಡುವುದು ಸರಿಯಲ್ಲ’ ಎಂದು ಅವರು ಹೇಳಿದರು.