ಕೆರೆಯನ್ನು ಒತ್ತುವರಿ ಮಾಡಿಕೊಂಡು 350ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಕೆಲವರು ಕೆರೆಯ ಒಳಗೆ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕೆರೆಗೆ ನೀರು ಬಂದಿದೆ. ಇದರಿಂದ ಗುಡಿಸಲುಗಳಿಗೆ ನೀರು ನುಗ್ಗಿದೆ. ಈ ನೀರು ಹೊರಗೆ ಹೋಗಲೆಂದು ಕೋಡಿಯನ್ನು ಒಡೆಯಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.