‘ಪಾತಾಳ ಗಂಗೆ ಯೋಜನೆ ಬಗ್ಗೆ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯೇ (ಸಿಎಸ್ಐಆರ್) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೇಂದ್ರ ಕೂಡ ಈ ಯೋಜನೆಗೆ ಧನಸಹಾಯ ಒದಗಿಸುವ ಭರವಸೆ ನೀಡಿದೆ. 2,500ದಿಂದ 3,000 ಅಡಿ ಆಳದ ಕೊಳವೆ ಬಾವಿ ಕೊರೆಯಲು ಅಂದಾಜು ₹10 ಕೋಟಿ ಖರ್ಚಾಗುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಜತೆಗೂ ಚರ್ಚಿಸಲಾಗುವುದು’ ಎಂದರು.