ಅಹಮದಾಬಾದ್: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರನ್ನು ಭೇಟಿ ಮಾಡುವ ಮುನ್ನ ಸ್ನಾನ ಮಾಡಿಕೊಂಡು ಬನ್ನಿ ಎಂದು ಖುಷಿನಗರ ಜಿಲ್ಲೆಯ ದಲಿತರಿಗೆ ಸೋಪು ಮತ್ತು ಶ್ಯಾಂಪು ಪ್ಯಾಕೆಟ್ಗಳನ್ನು ವಿತರಿಸಲಾಗಿತ್ತು. ಆದಿತ್ಯನಾಥ ಅವರ ಈ ನಡವಳಿಕೆಯನ್ನು ಖಂಡಿಸಿ ಗುಜರಾತಿನ ದಲಿತ ಸಂಘಟನೆಯೊಂದು ಉತ್ತರಪ್ರದೇಶ ಮುಖ್ಯಮಂತ್ರಿ ಅವರಿಗೆ 16 ಅಡಿ ಉದ್ದದ ಸೋಪು ಕಳಿಸಲು ನಿರ್ಧರಿಸಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ವರದಿ ಮಾಡಿದೆ.