ನವದೆಹಲಿ: ಸಾಕ್ಷಿ ಹೇಳಿದವರು ಹತ್ಯೆಗೆ ಒಳಗಾದ ವ್ಯಕ್ತಿಯ ಸಂಬಂಧಿ ಎಂಬ ಒಂದೇ ಕಾರಣಕ್ಕೆ ಅವರ ಹೇಳಿಕೆಯನ್ನು ತಿರಸ್ಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಇಂತಹ ಸಾಕ್ಷಿಗಳ ಹೇಳಿಕೆಯನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು ಎಂದು ನ್ಯಾಯ ಮೂರ್ತಿ ಎಲ್. ನಾಗೇಶ್ವರ ರಾವ್ ಮತ್ತು ನವೀನ್ ಸಿನ್ಹಾ ಅವರಿದ್ದ ನ್ಯಾಯಪೀಠ ಸಲಹೆ ಮಾಡಿದೆ.