‘ವನ್ಯಧಾಮದಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಡೆಸಲು ಸುಪ್ರೀಂಕೋರ್ಟ್ , ರಾಷ್ಟ್ರೀಯ ವನ್ಯಜೀವಿ ಮಂಡಳಿ, ರಾಜ್ಯ ವನ್ಯಜೀವಿ ಮಂಡಳಿಯ ಅನುಮತಿ ಅತ್ಯಗತ್ಯ. ಈ ಕಾಮಗಾರಿಯಲ್ಲಿ ಅರಣ್ಯ ಭೂಮಿಯನ್ನು ಅರಣ್ಯೇತರ ಚಟುವಟಿಕೆಗೆ ಪರಿವರ್ತನೆ ಮಾಡಲಾಗಿದೆ. ಹಾಗಾಗಿ 1980ರ ಅರಣ್ಯ ಸಂರಕ್ಷಣಾ ಕಾಯ್ದೆ ಅಡಿ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮತಿಯನ್ನೂ ಪಡೆಯಬೇಕಿತ್ತು’ ಎಂಬುದು ಅರ್ಜಿದಾರರ ಅಭಿಪ್ರಾಯ.