ಬೆಂಗಳೂರು: ನಿರ್ಮಾಪಕ ಕೆ.ಎ. ಸುರೇಶ್ ಅವರಿಂದ ತಮಗೆ ಕಿರುಕುಳ ಹೆಚ್ಚಾಗಿದೆ ಎಂದು ನಟಿ ಆವಂತಿಕಾ ಶೆಟ್ಟಿ ಆರೋಪಿಸಿದ್ದಾರೆ. ಈ ಬಗ್ಗೆ ಫೇಸ್ಬುಕ್ ಮತ್ತು ಟ್ವಿಟರ್ನಲ್ಲಿ ಆವಂತಿಕಾ ಶನಿವಾರ ಪೋಸ್ಟ್ ಒಂದನ್ನು ಹಾಕಿದ್ದಾರೆ.
‘ಆವಂತಿಕಾ ಶೆಟ್ಟಿ ಚಿತ್ರೀಕರಣಕ್ಕೆ ಸರಿಯಾಗಿ ಬರುತ್ತಿಲ್ಲ’ ಎಂದು ‘ಕನ್ನಡ ಮೀಡಿಯಂ ರಾಜು’ ಚಿತ್ರದ ನಿರ್ಮಾಪಕ ಕೆ.ಎ. ಸುರೇಶ್ ಇತ್ತೀಚೆಗೆ ಆರೋಪಿಸಿದ್ದರು. ಆದರೆ, ಆವಂತಿಕಾ ಈಗ ಸುರೇಶ್ ಅವರ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ.