ಪ್ರೆಸ್ಕ್ಲಬ್ನಲ್ಲಿ ಭಾನುವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದಲಿತ ಮುಖ್ಯಮಂತ್ರಿ ಕೂಗು ಈಗ ಅಪ್ರಸ್ತುತ. ನಾನು ದಲಿತ ಸಮುದಾಯದಲ್ಲಿ ಜನಿಸಿರುವುದು ಕೇವಲ ಆಕಸ್ಮಿಕ. ನಾನೇನು ಅರ್ಜಿ ಹಾಕಿ ಆ ಸಮುದಾಯದಲ್ಲಿ ಹುಟ್ಟಿಲ್ಲ. ನನ್ನನ್ನು ಯಾಕೆ ಹಾಗೆ ದಲಿತ ಮುಖ್ಯಮಂತ್ರಿ ಪಟ್ಟಕ್ಕೆ ಪರಿಗಣಿಸಿದ್ದಾರೋ ಗೊತ್ತಿಲ್ಲ. ಅಲ್ಲದೆ ಚುನಾವಣೆ ಮುಗಿದು, ಶಾಸಕಾಂಗ ಪಕ್ಷ ಆಯ್ಕೆ ಮಾಡಿದ ಮೇಲೆ ಮುಖ್ಯಮಂತ್ರಿಯಾಗುವ ಮಾತು’ ಎಂದರು.