ಮೈಸೂರು: ಮುಂಗಾರು ಮಳೆಗಾಗಿ ಪ್ರಾರ್ಥಿಸಿ ಕೊಡಗಿನ ತಲಕಾವೇರಿಯಲ್ಲಿ ನಡೆಯುತ್ತಿರುವ ಪರ್ಜನ್ಯ ಹೋಮಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸ್ಪಷ್ಟಪಡಿಸಿದರು.
'ನಾನು ಕನ್ನಂಬಾಡಿ ಕಟ್ಟೆ- ಹೀಗೊಂದು ಆತ್ಮಕಥನ' ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ವೈಯಕ್ತಿಕವಾಗಿ ಈ ಹೋಮ ಮಾಡುತ್ತಿದ್ದಾರೆ ಎಂದರು.
ನನಗೆ ಪ್ರಕೃತಿ ಮೇಲೆ ನಂಬಿಕೆ ಇದೆ. ಹೋಮ, ಪೂಜೆ ಮೇಲಲ್ಲ. ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗುವ ನಿರೀಕ್ಷೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.