ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅಡ್ಡಿಪಡಿಸಿದ್ದ ಮಳೆರಾಯ ಬಿಡುವು ನೀಡಿರುವುದರಿಂದ ಪಂದ್ಯ ಮತ್ತೆ ಆರಂಭವಾಗಿದೆ.
ಮಳೆಯಿಂದ ಪಂದ್ಯ 30 ನಿಮಿಷ ನಿಂತಿತ್ತು. ಈ ವೇಳೆ ಒವರ್ಗಳನ್ನು ಕಡಿತ ಮಾಡಿಲ್ಲ.
ಎಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.
ಮೊದಲ ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭ ಪಡೆಯಿತಾದರು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. 9.5 ಒವರ್ನಲ್ಲಿ ಮಳೆ ಆರಂಭವಾಯಿತು. ಎಚ್ಚರಿಕೆಯ ಆಟ ಆಡುತ್ತಿರುವ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.