ಕ್ಷೇತ್ರದ ಚಾರುಕೀರ್ತಿ ಭಟ್ಟಾಕರ ಸ್ವಾಮೀಜಿ, ಸಚಿವ ಎ. ಮಂಜು, ಮಹಾಮಸ್ತಕಾಭಿಷೇಕ ಮಹೋತ್ಸವದ ರಾಷ್ಟ್ರೀಯ ಸಮಿತಿ ಅಧ್ಯಕ್ಷೆ ಸರಿತಾ ಎಂ.ಕೆ.ಜೈನ್, ಕಾರ್ಯಾಧ್ಯಕ್ಷ ಎಸ್.ಜಿತೇಂದ್ರಕುಮಾರ್ ಹಾಗೂ ಅಪಾರ ಸಂಖ್ಯೆ ಭಕ್ತರು ಪುಷ್ಪವೃಷ್ಟಿಯೊಂದಿಗೆ ಪಾದಪೂಜೆ ನಡೆಸಿದರು. ಈ ಸಂದರ್ಭದಲ್ಲಿ ಭಕ್ತರಿಂದ ಜಯಘೋಷ ಮೊಳಗಿತು.