ಪ್ರಜಾವಾಣಿ – ಡೆಕ್ಕನ್ ಹೆರಾಲ್ಡ್ನ ಮಾತೃ ಸಂಸ್ಥೆ ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್ ಸ್ಥಾಪಿಸಿರುವ ಟ್ರಸ್ಟ್, ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ಅರ್ಹ ಬಡ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಧನ ಸಹಾಯ ಮಾಡುತ್ತ ಬಂದಿದೆ. ಸಾರ್ವಜನಿಕರು ಮತ್ತು ದಾನಿಗಳು ಸಂಸ್ಥೆಯ ಈ ಉದ್ದೇಶಕ್ಕೆ ನೆರವಾಗಬೇಕೆಂದು ಕೋರುತ್ತೇವೆ. ಚೆಕ್ ಅಥವಾ ಡಿ.ಡಿ. ರೂಪದಲ್ಲಿ ಹಣವನ್ನು ‘Deccan Herald-Prajavani Relief Trust’ ಹೆಸರಿಗೆ ಕಳುಹಿಸಬಹುದು.
ಆನ್ಲೈನ್ನಲ್ಲಿ www.prajavani.net/edurelief/index.html ಮೂಲಕವೂ ಹಣ ವರ್ಗಾಯಿಸುವ ಸೌಲಭ್ಯ ಇದೆ. ಒಂದು ಸಾವಿರ ರೂಪಾಯಿಗಿಂತ ಅಧಿಕ ನೆರವು ನೀಡುವವರ ಹೆಸರನ್ನು ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ನಲ್ಲಿ ಪ್ರಕಟಿಸಲಾಗುವುದು. ಈ ದೇಣಿಗೆಗೆ ಆದಾಯ ತೆರಿಗೆ ಸೆಕ್ಷನ್ 80 ಜಿ ಅನ್ವಯ ಶೇ 50 ರಷ್ಟು ಆದಾಯ ತೆರಿಗೆ ವಿನಾಯಿತಿ ಇದೆ.
2017ರ ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಮಾತ್ರ ಈ ನೆರವು ಕೋರಿ ಅರ್ಜಿ ಸಲ್ಲಿಸಬಹುದು. ಅರ್ಜಿಯಲ್ಲಿ ವಿಳಾಸ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳಿರಬೇಕು. ಲಕೋಟೆ ಮೇಲೆ ‘ಶೈಕ್ಷಣಿಕ ನೆರವಿಗೆ ಅರ್ಜಿ’ ಎಂದು ಬರೆಯಬೇಕು.
ವಿಳಾಸ: ಮ್ಯಾನೇಜರ್, ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ ಪರಿಹಾರ ಟ್ರಸ್ಟ್,ನಂ. 75, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು–560001.
ಸೂಚನೆ: ದೇಣಿಗೆ ನೀಡುವವರು ಲಕೋಟೆ ಮೇಲೆ ‘ಶೈಕ್ಷಣಿಕ ನೆರವಿಗೆ ಕೊಡುಗೆ’ ಎಂದು ನಮೂದಿಸಲು ಮನವಿ.
‘ಪ್ರಜಾವಾಣಿ’ ಸ್ಕಾಲರ್ಶಿಪ್ ಪಡೆದ ವಿದ್ಯಾರ್ಥಿಗಳ ಅನಿಸಿಕೆ
*
ನಮ್ಮ ತಂದೆ ಇಲ್ಲ, ತಾಯಿಯೇ ದುಡಿದು ಶಿಕ್ಷಣ ಕೊಡಿಸುತ್ತಿದ್ದಾರೆ. ‘ಪ್ರಜಾವಾಣಿ’ಯ ಸ್ಕಾಲರ್ಶಿಪ್ನಿಂದ ಪಠ್ಯಪುಸ್ತಕ ಮತ್ತು ನೋಟ್ ಬುಕ್ಗಳನ್ನು ಖರೀದಿಸಿದೆ. ಪ್ರಥಮ ಪಿಯುಸಿ ವಿಜ್ಞಾನದಲ್ಲಿ ಶೇ 71 ಅಂಕ ಗಳಿಸಿದ್ದೇನೆ. ‘ಪ್ರಜಾವಾಣಿ’ಯ ಸಹಾಯವನ್ನು ನನ್ನ ಜೀವನದಲ್ಲಿ ಮರೆಯುವಂತಿಲ್ಲ.
–ವಿನೋದ್ಕುಮಾರ್ ಕೆ.ಎಚ್.
ಹಚ್ಚೊಳ್ಳಿ, ಸಿರುಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ
*
ತುಂಬಾ ಸಹಾಯವಾಗಿದೆ
‘ಪ್ರಜಾವಾಣಿ– ಡೆಕ್ಕನ್ಹೆರಾಲ್ಡ್’ ಸಂಸ್ಥೆ ನೀಡಿದ ಆರ್ಥಿಕ ನೆರವಿನಿಂದ ತುಂಬಾ ಅನುಕೂಲವಾಯಿತು. ವಿಜಯ ವಿಠ್ಠಲ ಕಾಲೇಜಿನಲ್ಲಿ ಓದುತ್ತಿದ್ದು, ಪಿಯುಸಿ ಪ್ರಥಮ ವರ್ಷದಲ್ಲಿ ಶೇ 91ರಷ್ಟು ಅಂಕಗಳಿಸಿದ್ದೇನೆ. ನನಗೆ ಎಂಜಿನಿಯರ್ ಆಗುವ ಆಸೆ ಇದೆ. ಈ ನಿಟ್ಟಿನಲ್ಲಿ ಶ್ರಮಪಡುವೆ.
–ಪದ್ಮಶ್ರೀ ಕರಣಂ
ಗಂಗೋತ್ರಿ ಲೇಔಟ್ ಮೈಸೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.