ಗರ್ಭಿಣಿಗೆ ಇರಿದು, ಸುಟ್ಟರು: ‘ಯುವತಿಯ ತಾಯಿ, ಅಕ್ಕಂದಿರು, ಅಣ್ಣ–ತಮ್ಮಂದಿರು, ಭಾವ ಸೇರಿಕೊಂಡು ದಂಪತಿ ವಾಸಿಸುತ್ತಿದ್ದ ಮನೆಗೆ ನುಗ್ಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಾಯಬಣ್ಣನ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಬಳಿಕ ಬಾನು ಬೇಗಂ ಗರ್ಭಿಣಿ ಎಂಬುದನ್ನು ತಿಳಿದು ಆಕೆಯ ಮೇಲೂ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾರೆ. ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಾಯಬಣ್ಣನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಬಸವನಬಾಗೇವಾಡಿ ಡಿವೈಎಸ್ಪಿ ಪ್ರಭುಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.