ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಧವ್‌ ಪ್ರಕರಣ: ಸಂಸತ್ತಿನಲ್ಲಿ ಚರ್ಚೆಗೆ ನಿರ್ಧಾರ

Last Updated 5 ಜೂನ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಕುಲಭೂಷಣ್‌ ಜಾಧವ್‌ ಗಲ್ಲು ಶಿಕ್ಷೆಗೆ  ಅಂತರರಾಷ್ಟ್ರೀಯ ನ್ಯಾಯಾಲಯವು ತಡೆಯಾಜ್ಞೆ ನೀಡಿರುವ ಕುರಿತಂತೆ ಪಾಕಿಸ್ತಾನ ಸಂಸತ್ತಿನಲ್ಲಿ ಚರ್ಚಿಸಲು ಸೋಮವಾರ ನಿರ್ಧರಿಸಲಾಯಿತು.

ಈ ಕುರಿತಂತೆ ನಿಲುವಳಿ ಸೂಚನೆ ಮಂಡಿಸಿದ ಜಮಾತ್‌–ಐ–ಇಸ್ಲಾಮಿ ಪಕ್ಷದ ಸಂಸದ ಸಿರಾಜುಲ್‌ಹಕ್‌,  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರವು ಸರಿಯಾಗಿ ಸಿದ್ಧತೆ ನಡೆಸಿರಲಿಲ್ಲ ಎಂಬುದು ನ್ಯಾಯಾಲಯದ ತೀರ್ಪಿನಿಂದ ಸಾಬೀತಾಗಿದೆ ಎಂದರು.

ನಿಲುವಳಿಯನ್ನು ಅಂಗೀಕರಿಸಿದ ಸಭಾಧ್ಯಕ್ಷ ರಜಾ ರಬ್ಬಾನಿ ಅವರು ಸದನದಲ್ಲಿ ಈ  ವಿವರಣೆ ನೀಡುವಂತೆ ವಿದೇಶಾಂಗ ಸಚಿವ ಹಾಗೂ ಅಟಾರ್ನಿ ಜನರಲ್‌ ಅವರಿಗೆ ನೋಟಿಸ್‌ ಜಾರಿ ಮಾಡಿದರು.

ಈ ಪ್ರಕರಣದಲ್ಲಿ ಪಾಕಿಸ್ತಾನ ನಿರೀಕ್ಷೆಯಂತೆ ನಡೆದುಕೊಂಡಿಲ್ಲ. ಇದು ರಾಷ್ಟ್ರಕ್ಕೆ ಮುಜುಗರ ತಂದಿದೆ ಎಂದು ಹಕ್‌ ಹೇಳಿದ್ದಾರೆ.

ಜಾಧವ್‌ ಬಂಧನ ಪ್ರಮುಖ ಯಶಸ್ಸು. ಆದರೆ ಭಾರತದ ಪ್ರಜೆಗೆ ಸಂಬಂಧಿಸಿದ ವಾಸ್ತವಾಂಶಗಳನ್ನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ವಿವರಿಸುವ ಅವಕಾಶವನ್ನು ಪಾಕಿಸ್ತಾನ ಕಳೆದುಕೊಂಡಿತು ಎಂದೂ ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT