ಬಾಗಲಕೋಟೆ: ಜಿಲ್ಲೆಯಲ್ಲಿ ಸಾಂಸ್ಕೃತಿಕ ಭವನಗಳ ನಿರ್ಮಾಣ ಕಾಮಗಾರಿ ಮತ್ತು ಕಡತ ವಿಲೇವಾರಿಯಲ್ಲಿ ವಿಳಂಬ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ ಇಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರ ಸೂಚನೆ ಮೇರೆಗೆ ಕರಿಶಂಕರಿ ಅವರನ್ನು ಅಮಾನತು ಮಾಡಿ ಇಲಾಖೆಯ ನಿರ್ದೇಶಕಿ ಅರ್ಚನಾ ಜೂನ್ 1ರಂದು ಆದೇಶಿಸಿದ್ದಾರೆ. ಶ್ರೀಶೈಲ ಕರಿಶಂಕರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆಗಿದ್ದಾರೆ.