‘ಪೌರಕಾರ್ಮಿಕರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಸಂಬಳ ನೀಡಿಲ್ಲ. ಇದರಿಂದ ಅವರು ಕಸ, ಕಡ್ಡಿ ವಿಲೇವಾರಿ ಮಾಡುತ್ತಿಲ್ಲ. ಇದರಿಂದ ನಗರದ ಹಾದಿ ಬೀದಿಗಳಲ್ಲಿ ಕಸ, ಕಡ್ಡಿಗಳ ರಾಶಿ ಬಿದ್ದಿದೆ. ನಾಗರಿಕರಿಂದ ನಾವು ನಿಂದನೆ ಕೇಳಬೇಕಾಗಿದೆ. ನೀವು ಪೌರ ಕಾರ್ಮಿಕರಿಗೆ ಸಂಬಳ ಕೊಟ್ಟು ಕೆಲಸ ಮಾಡಿಸುವುದಾದರೆ ಮಾಡಿಸಿ, ಇಲ್ಲ ಅಂದ್ರೆ ನೀವೇ ಬಂದು ನಮ್ಮ ವಾರ್ಡ್ಗಳಲ್ಲಿ ಕಸ ಕಡ್ಡಿ ತೆಗೆಯಿರಿ’ ಎಂದು ಆಯುಕ್ತ ಹರೀಶ್ ಅವರನ್ನು ತರಾಟೆಗೆ ತೆಗೆದುಕೊಂಡರು.