ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ವಿದ್ಯಾರ್ಥಿಗಳಿಗೆ ನೆರವಾಗಿ ಉದಾರ ಕೊಡುಗೆ ನೀಡಿ

Last Updated 6 ಜೂನ್ 2017, 19:30 IST
ಅಕ್ಷರ ಗಾತ್ರ

ಪ್ರಜಾವಾಣಿ – ಡೆಕ್ಕನ್‌ ಹೆರಾಲ್ಡ್‌ನ ಮಾತೃ ಸಂಸ್ಥೆ ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್‌ ಲಿಮಿಟೆಡ್‌ ಸ್ಥಾಪಿಸಿರುವ ಟ್ರಸ್ಟ್‌, ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ಅರ್ಹ ಬಡ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಧನ ಸಹಾಯ ಮಾಡುತ್ತ ಬಂದಿದೆ. ಸಾರ್ವಜನಿಕರು ಮತ್ತು ದಾನಿಗಳು ಸಂಸ್ಥೆಯ ಈ ಉದ್ದೇಶಕ್ಕೆ ನೆರವಾಗಬೇಕೆಂದು ಕೋರುತ್ತೇವೆ. ಚೆಕ್‌ ಅಥವಾ ಡಿ.ಡಿ. ರೂಪದಲ್ಲಿ ಹಣವನ್ನು ‘Deccan Herald-Prajavani Relief Trust’ ಹೆಸರಿಗೆ ಕಳುಹಿಸಬಹುದು.

ಆನ್‌ಲೈನ್‌ನಲ್ಲಿ www.prajavani.net/edurelief/index.html  ಮೂಲಕವೂ ಹಣ ವರ್ಗಾಯಿಸುವ ಸೌಲಭ್ಯ ಇದೆ. ಒಂದು ಸಾವಿರ ರೂಪಾಯಿಗಿಂತ ಅಧಿಕ ನೆರವು ನೀಡುವವರ ಹೆಸರನ್ನು ಪ್ರಜಾವಾಣಿ ಮತ್ತು ಡೆಕ್ಕನ್‌ ಹೆರಾಲ್ಡ್‌ನಲ್ಲಿ ಪ್ರಕಟಿಸಲಾಗುವುದು. ಈ ದೇಣಿಗೆಗೆ ಆದಾಯ ತೆರಿಗೆ ಸೆಕ್ಷನ್‌ 80 ಜಿ ಅನ್ವಯ ಶೇ 50 ರಷ್ಟು ಆದಾಯ ತೆರಿಗೆ ವಿನಾಯಿತಿ ಇದೆ.

2017ರ ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಮಾತ್ರ ಈ ನೆರವು ಕೋರಿ ಅರ್ಜಿ ಸಲ್ಲಿಸಬಹುದು. ಅರ್ಜಿಯಲ್ಲಿ ವಿಳಾಸ, ಮೊಬೈಲ್‌ ಸಂಖ್ಯೆ ಮತ್ತಿತರ ವಿವರಗಳಿರಬೇಕು. ಲಕೋಟೆ ಮೇಲೆ ‘ಶೈಕ್ಷಣಿಕ ನೆರವಿಗೆ ಅರ್ಜಿ’ ಎಂದು ಬರೆಯಬೇಕು.

* ಸೂಚನೆ ದೇಣಿಗೆ ನೀಡುವವರು ಲಕೋಟೆ ಮೇಲೆ ‘ಶೈಕ್ಷಣಿಕ ನೆರವಿಗೆ ಕೊಡುಗೆ’ ಎಂದು ನಮೂದಿಸಲು ಮನವಿ.

ವಿಳಾಸ
ಮ್ಯಾನೇಜರ್‌, ಡೆಕ್ಕನ್‌ ಹೆರಾಲ್ಡ್‌–
ಪ್ರಜಾವಾಣಿ ಪರಿಹಾರ ಟ್ರಸ್ಟ್,
ನಂ. 75, ಮಹಾತ್ಮ ಗಾಂಧಿ ರಸ್ತೆ,
ಬೆಂಗಳೂರು–560001.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT