ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಬಸ್‌ಪೇಟೆ: ಸಮುದಾಯ ಭವನಕ್ಕೆ ಉದ್ಘಾಟನೆ ಭಾಗ್ಯವಿಲ್ಲ

Last Updated 7 ಜೂನ್ 2017, 20:10 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕು ಗೋವಿಂದಪುರ ಗ್ರಾಮದಲ್ಲಿ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು10 ವರ್ಷಗಳು ಕಳೆದಿದ್ದರೂ ಇನ್ನೂ ಉದ್ಘಾಟನೆ ಭಾಗ್ಯ ದೊರೆತಿಲ್ಲ.

ಭವನದ ಸುತ್ತಲೂ ಬೇಲಿ ಗಿಡಗಳು ಬೆಳೆದಿವೆ. ಕಿಟಕಿಯ ಕಂಬಿಗಳು ತುಕ್ಕು ಹಿಡಿಯುತ್ತಿವೆ. ಮೆಟ್ಟಿಲುಗಳು ಪಾಚಿಯಿಂದ ಕೂಡಿವೆ. ಭವನದೊಳಗೆ ದೂಳು, ಕಸ ಕಡ್ಡಿ ತುಂಬಿದೆ. ಭವನದ ಸುತ್ತಲೂ ಕಾಂಪೌಂಡ್‌ ನಿರ್ಮಿಸಿದ್ದರೂ ಅದು ಅಪೂರ್ಣವಾಗಿದೆ.

‘16 ವರ್ಷಗಳ ಹಿಂದೆ ಭವನದ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು.  ಹಣಕಾಸಿನ ಕೊರತೆಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗಿತ್ತು. ಐದಾರು ವರ್ಷಗಳ ಬಳಿಕ ಕಟ್ಟಡದ ಕಾಮಗಾರಿ ಭಾಗಶಃ ಪೂರ್ಣಗೊಂಡರೂ ಇನ್ನೂ ಸಾರ್ವಜನಿಕರ ಬಳಕೆಗೆ ಅವಕಾಶ ಮಾಡಿಕೊಟ್ಟಿಲ್ಲ’ ಎಂದು ಸ್ಥಳೀಯ ನಿವಾಸಿಯೊಬ್ಬರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT