ಕರ್ನಾಟಕ ರಕ್ಷಣಾ ವೇದಿಕೆಯ ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಸುರೇಶ್, ‘ಪ್ರತಿದಿನ 83 ಲೋಡ್ ಪ್ರತ್ಯೇಕಿಸಿದ ಕಸವನ್ನು ಮಾತ್ರ ವಿಲೇವಾರಿ ಮಾಡುತ್ತೇವೆ ಎಂದು ಮಾತ್ರ ಅನುಮತಿ ಪಡೆದಿದ್ದರು. ಆದರೆ, 300ಕ್ಕೂ ಹೆಚ್ಚು ಲೋಡ್ ಬೇರ್ಪಡಿಸದ ಕಸವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.