ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಪರ್ಯಾಯ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ ಅವರು, ‘ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಮಾಡುವುದರಿಂದ ಕನ್ನಡ ಭಾಷೆ ನಶಿಸಿ ಹೋಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳಲ್ಲಿ ಮಲಯಾಳ ಭಾಷೆಯನ್ನು ಕಡ್ಡಾಯ ಮಾಡಬಾರದು’ ಎಂದು ಆಗ್ರಹಿಸಿದರು.