ಮುನೇಶ್ವರಸ್ವಾಮಿ ದೇವಾಲಯ, ಬಸವೇಶ್ವರ ಸ್ವಾಮಿ ದೇವಾಲಯ, ಸತ್ಯಮ್ಮ ದೇವಾಲಯಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಡೊಳ್ಳುಕುಣಿತ, ತಮಟೆ ವಾದನಗಳೊಂದಿಗೆ ಬಹುತೇಕ ದೇವಾಲಯಗಳಿಗೆ ತೆರಳಿದ ಮಹಿಳೆಯರು, ಮಕ್ಕಳು ತಂಬಿಟ್ಟಿನ ದೀಪಗಳನ್ನು ಬೆಳಗಿ ಭಕ್ತಿಭಾವಗಳಿಂದ ಪೂಜೆ ಸಲ್ಲಿಸಿದರು.
ಮಹಿಳೆಯರು ದೀಪ ಹೊತ್ತುಕೊಂಡು ಬೆಂಕಿಕೆಂಡಗಳನ್ನು ಹಾದುಹೋಗಿ ಭಕ್ತಿಪ್ರದರ್ಶನ ಮಾಡಿದರು. ಕೆಲವು ಭಕ್ತರು ಬಾಯಿಗೆ ಬೀಗ ಹಾಕಿಕೊಂಡು ಹರಕೆ ಸಮರ್ಪಿಸಿದರು. ಎಲ್ಲಾ ದೇವಾಲಯಗಳಿಗೆ, ಗ್ರಾಮದ ಬೀದಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ವಾದ್ಯಗೋಷ್ಠಿ ಏರ್ಪಡಿಸಲಾಗಿತ್ತು.