‘ಕುಂಬ್ಳೆ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ ಯಶಸ್ಸಿನ ಪಥದಲ್ಲಿ ಸಾಗುತ್ತಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡ ಸೆಮಿಫೈನಲ್ ಇಲ್ಲವೇ ಫೈನಲ್ ಪ್ರವೇಶಿಸಿದರೆ ಕುಂಬ್ಳೆ ಅವರನ್ನು ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ. ಕುಂಬ್ಳೆ ಕಾರ್ಯವೈಖರಿ ಸರಿ ಇಲ್ಲ ಎಂದು ನಾಯಕ ಕೊಹ್ಲಿ ಇದುವರೆಗೂ ಯಾರ ಬಳಿಯೂ ದೂರು ನೀಡಿಲ್ಲ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.