ಬೆಂಗಳೂರು: ‘ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣ ಭಾವಚಿತ್ರ ಹಾಕಲು ಆದೇಶಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇದೇ 14ರಂದು ಅರಮನೆ ಮೈದಾನದ ಕೃಷ್ಣ ವಿಹಾರಿ ಸಭಾಂಗಣದಲ್ಲಿ ಅಭಿನಂದಿಸುತ್ತೇವೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಜಯಪುರದ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರನ್ನು ಇಡಲು ಸೂಚಿಸಿರುವುದು ಸ್ವಾಗತಾರ್ಹ’ ಎಂದರು.