‘ಕೆಂಪೇಗೌಡ ಬಡಾವಣೆಯು ನಗರದ ಹೊರವಲಯದಲ್ಲಿದ್ದು, ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿಲ್ಲ. ಅಲ್ಲದೆ, ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ. ಅರ್ಕಾವತಿ ಬಡಾವಣೆಯು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ಇದೆ. ಹೀಗಾಗಿ ಅಲ್ಲಿಯೇ ನಿವೇಶನಗಳನ್ನು ನೀಡಬೇಕು’ ಎಂದು ಅರ್ಕಾವತಿ ಬಡಾವಣೆಯ ಅರ್ಜಿದಾರ ಮಹೇಶ್ ಒತ್ತಾಯಿಸಿದರು.