ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ರೈತ ಕೆ.ಕೃಷ್ಣೇಗೌಡ (41) ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ನನ್ನ ಸಾವಿಗೆ ನಾನೇ ಕಾರಣ. ನನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ವ್ಯವಸಾಯಕ್ಕಾಗಿ ಬ್ಯಾಂಕ್ ಮತ್ತು ಸ್ನೇಹಿತರ ಬಳಿ ಸಾಲ ಮಾಡಿಕೊಂಡಿದ್ದೇನೆ. ಬೆಳೆ ಸರಿಯಾಗಿ ಆಗದಿರುವುದರಿಂದ ಸಾಲ ತೀರಿಸಲಾಗದೆ ಮನ ನೊಂದಿದ್ದೇನೆ. ದಯಮಾಡಿ ನನ್ನನ್ನು ಕ್ಷಮಿಸಿ’ ಎಂದು ಕೃಷ್ಣೇಗೌಡ ಚೀಟಿ ಬರೆದಿಟ್ಟಿದ್ದಾರೆ.