ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀ ಶ್ರೀ ರವಿಶಂಕರ ಗುರೂಜಿಗೆ ಕೊಲೆ ಬೆದರಿಕೆ: ದೂರು ದಾಖಲು

Last Updated 9 ಜೂನ್ 2017, 20:12 IST
ಅಕ್ಷರ ಗಾತ್ರ

ಬೆಂಗಳೂರು: ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ ಗುರೂಜಿ ಅವರಿಗೆ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಸಂಸ್ಥೆಯ ಆಡಳಿತಾಧಿಕಾರಿ ಕಗ್ಗಲೀಪುರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ..

‘ಗುರೂಜಿ ಅವರನ್ನು ಗುಂಡಿಟ್ಟು ಹತ್ಯೆ ಮಾಡುತ್ತೇವೆ’ ಎಂದು ಮೈಸೂರಿನ ಸ್ನಾತಕೋತ್ತರ ಪದವೀಧರ ಎಚ್‌.ರವೀಂದ್ರ ಎಂಬುವರು ಫೇಸ್‌ಬುಕ್‌ ಖಾತೆ
ಯಲ್ಲಿ ಬರೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಕೊಲೆ ಬೆದರಿಕೆ ಸಂದೇಶವನ್ನು ಆರೋಪಿಯು ಖಾತೆಯಿಂದ ಅಳಿಸಿ ಹಾಕಿದ್ದಾನೆ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಕನಕಪುರ ರಸ್ತೆಯ ಹಾರೋಹಳ್ಳಿಯಲ್ಲಿ ನೆಲೆಸಿರುವ ಮಾಹಿತಿ ಇದ್ದು, ಆತನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT