ರಾಯಪುರದಲ್ಲಿ ಶುಕ್ರವಾರ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ್ದ ಅಮಿತ್ ಷಾ, ‘ಕಾಂಗ್ರೆಸ್ ತತ್ವ, ಸಿದ್ಧಾಂತಗಳಿಂದ ಹುಟ್ಟಿದ ಪಕ್ಷವಲ್ಲ. ದೇಶದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಒಂದು ಅಸ್ತ್ರವಾಗಿತ್ತಷ್ಟೆ. ಚತುರ ವರ್ತಕರಂತಿದ್ದ ಗಾಂಧಿ ಅವರಿಗೆ ಮುಂದೇನಾಗುತ್ತದೆ ಎಂಬುದು ತಿಳಿದಿತ್ತು. ಹೀಗಾಗಿ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ಉಳಿಯಬಾರದೆಂದು ಗಾಂಧಿ ಹೇಳಿದ್ದರು’ ಎಂದು ತಿಳಿಸಿದ್ದರು.