ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕಿ ಹೆಸರು ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ

Last Updated 10 ಜೂನ್ 2017, 19:30 IST
ಅಕ್ಷರ ಗಾತ್ರ

ನಾಗಮಂಗಲ: ‘ನನ್ನ ಸಾವಿಗೆ ಶಿಕ್ಷಕಿಯೇ ಕಾರಣ’ ಎಂದು ಅಂಗೈ ಮೇಲೆ ಬರೆದುಕೊಂಡು ಪಟ್ಟಣದ ಟಿ.ಬಿ. ಬಡಾವಣೆಯಲ್ಲಿ ಶನಿವಾರ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.

ಸುಭಾಷ್ ನಗರದ ನಾಗಮ್ಮ ಮತ್ತು ಶ್ರೀನಿವಾಸ ದಂಪತಿ ಪುತ್ರಿ ಭವಾನಿ (13) ಮೃತಪಟ್ಟವಳು.

ಸಾರೇಮೇಗಲಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಉತ್ತೀರ್ಣಗೊಂಡಿದ್ದು, ಕಳೆದ ಕೆಲ ದಿನಗಳಿಂದ ಕೆಎನ್ಎಸ್ ಶಾಲೆಯಲ್ಲಿ 8ನೇ ತರಗತಿಗೆ ಹೋಗುತ್ತಿದ್ದಳು.

ಭವಾನಿ

‘ತನ್ನ ವರ್ಗಾವಣೆ ಪತ್ರ (ಟಿ.ಸಿ) ತರಲು ಪ್ರಾಥಮಿಕ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಅಲ್ಲಿನ ಶಿಕ್ಷಕಿ ಯಶೋದಮ್ಮ ಬೈದರು. ಇದರಿಂದ ಬೇಸತ್ತ ಆಕೆ, ಮಧ್ಯಾಹ್ನವೇ ಗುಡಿಸಲಿನ ತೊಲೆಗೆ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕಿ ತಲೆಮರೆಸಿಕೊಂಡಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT