ಪರಿಹಾರವಲ್ಲ: ರೈತರ ಖಾತೆಗೆ ₹ 1 ಜಮಾ ಆಗಿದ್ದು ಪರಿಹಾರದ ಮೊತ್ತವಲ್ಲ. ಈ ವಿಷಯದಲ್ಲಿ ಪ್ರತಿಪಕ್ಷಗಳು ಸುಳ್ಳು ಹೇಳಿವೆ. ರೈತರ ಬ್ಯಾಂಕ್ ಖಾತೆಗಳನ್ನು ಆಧಾರ್ಗೆ ಜೋಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ, ಆಧಾರ್ ಜೋಡಣೆ ಸರಿಯಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ಖಾತೆಗಳಿಗೆ ₹1 ಹಾಕುತ್ತಿದ್ದಾರೆ. ಇದಕ್ಕಾಗಿ ರೈತರು ಗಾಬರಿಪಡುವ ಅಗತ್ಯವಿಲ್ಲ ಎಂದರು.