ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ತನ್ನ ಬಡತನ ಕಳೆದುಕೊಳ್ಳುತ್ತಿದೆ: ಯಡಿಯೂರಪ್ಪ

Last Updated 10 ಜೂನ್ 2017, 20:03 IST
ಅಕ್ಷರ ಗಾತ್ರ

ನೆಲಮಂಗಲ: ‘ಗರೀಬಿ ಹಠಾವೊ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ ತನ್ನ ಗರೀಬಿ ಹಠಾವೊ ಮಾಡಿಕೊಂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಟೀಕಿಸಿದರು.

ಲೋಹಿತ್‌ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ‘ಜನಸಂಪರ್ಕ ಅಭಿಯಾನ’ ಹಾಗೂ ‘ನಮ್ಮ ನಡಿಗೆ ದೀನ ದಿಲಿತರ ಮನೆಯಡಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭೀಕರ ಬರಗಾಲ ಎದುರಿಸಿದರೂ ಸಿದ್ದರಾಮಯ್ಯ ಸರ್ಕಾರ ಒಂದು ರೂಪಾಯಿಯೂ ಬೆಳೆ ಸಾಲದ ಪರಿಹಾರ ನೀಡಲಿಲ್ಲ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದುಕೊಳ್ಳುತ್ತಿರುವ ಅನ್ನ ಭಾಗ್ಯ ಯೋಜನೆಯನ್ನು ತಮ್ಮ ಸಾಧನೆ ಎಂದು ಹೇಳಿಕೊಂಡು ಸಿದ್ದರಾಮಯ್ಯ ಬೀಗುತ್ತಿದ್ದಾರೆ’ ಎಂದು ಹೇಳಿದರು.

‘ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀಡುತ್ತಿರುವ ಸೌಲಭ್ಯವನ್ನು ಪ್ರತ್ಯೇಕವಾಗಿ ವಿವರಿಸುವ ಫಲಕಗಳನ್ನು ಹಾಕಬೇಕು’ ಎಂದು ಕಾರ್ಯಕರ್ತರಿಗೆ ಸೂಚಿಸಿದರು.

ಮಾಜಿ ಶಾಸಕ ಎಂ.ವಿ.ನಾಗರಾಜ್‌, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಬಿ. ಹೊಂಬಯ್ಯ ಮಾತನಾಡಿದರು. ಇದಕ್ಕೂ ಮುನ್ನ ಯಡಿಯೂರಪ್ಪ ಅವರು ದಲಿತ ಎಚ್‌.ಬೈಲಪ್ಪ ಅವರ ಮನೆಯಲ್ಲಿ  ಇಡ್ಲಿ , ಚಟ್ನಿ ಉಪಹಾರ ಸೇವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT