‘ಬಡವರ ಕಲ್ಯಾಣಕ್ಕೆಂದು ಸರ್ಕಾರ ವಿನಿಯೋಗಿಸುವ ಪ್ರತಿ ಒಂದು ರೂಪಾಯಿಯಲ್ಲಿ ಕೇವಲ 15 ಪೈಸೆ ಮಾತ್ರ ಅರ್ಹ ಫಲಾನುಭವಿಗಳಿಗೆ ದೊರೆಯುತ್ತದೆ ಎಂದು ದೇಶದ ಮಾಜಿ ಪ್ರಧಾನಿಯೊಬ್ಬರು ಹೇಳಿದ್ದರು. ಇದು ಆಧಾರ್ ವಿಚಾರದಲ್ಲಿಯೂ ಅನ್ವಯವಾಗುತ್ತದೆ ಎಂಬುದರಲ್ಲಿ ಅನುಮಾನವಿಲ್ಲ. ಈ ವಿಚಾರದಲ್ಲಿ ಜಾಗರೂಕರಾಗಿರಬೇಕು’ ಎಂದು ನ್ಯಾಯಮೂರ್ತಿ ಎ.ಕೆ. ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರಿದ್ದ ನ್ಯಾಯಪೀಠ 157 ಪುಟಗಳ ತೀರ್ಪಿನಲ್ಲಿ ಹೇಳಿತ್ತು.