ವಾಹನ ಸಂಚಾರ: ಒಂದು ವರ್ಷ ಎಂಟು ತಿಂಗಳ ಬಳಿಕ ಎರಡನೇ ಶನಿವಾರ ವಾಹನಗಳು ಸಂಚರಿಸಿದವು. ನೃಪತುಂಗ ರಸ್ತೆಯ ದುರಸ್ತಿ ವೇಳೆ ಉದ್ಯಾನದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಮಾಲಿನ್ಯ ಪ್ರಮಾಣ ದ್ವಿಗುಣಗೊಂಡಿತ್ತು. ವಾಹನ ಸಂಚಾರಕ್ಕೆ ಹೆಚ್ಚು ಅವಕಾಶ ಮಾಡಿಕೊಟ್ಟಲ್ಲಿ, ಉದ್ಯಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗುತ್ತದೆ ಎಂದು ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದರು.