ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಯೋಜನೆಗೆ ಅಂಗವಿಕಲ ಮಕ್ಕಳು ರಾಯಭಾರಿಗಳು

Last Updated 11 ಜೂನ್ 2017, 19:41 IST
ಅಕ್ಷರ ಗಾತ್ರ

ತಿರುವನಂತಪುರ: ಬೌದ್ಧಿಕ ನ್ಯೂನತೆಯ ಹಾಗೂ ಅಂಗವಿಕಲ ಮಕ್ಕಳ ಸಬಲೀಕರಣಕ್ಕಾಗಿ ಕೇರಳ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಅನುಯಾತ್ರ’ ಕಾರ್ಯಕ್ರಮಕ್ಕೆ 23 ಮಕ್ಕಳನ್ನು ರಾಯಭಾರಿಗಳನ್ನಾಗಿ ನಿಯೋಜಿಸಲಾಗಿದೆ.

ಜಾದೂಗಾರಿಕೆಯಲ್ಲಿ ವಿಶೇಷ ತರಬೇತಿ ಪಡೆದಿರುವ ಈ ಮಕ್ಕಳು, ಆಟಿಸಂ, ಮಿದುಳು ಲಕ್ವ, ಖಿನ್ನತೆಯಿಂದ ಬಳಲುತ್ತಿದ್ದಾರೆ. ಇವರಿಗೆ ಇಲ್ಲಿನ ಮ್ಯಾಜಿಕ್ ಅಕಾಡೆಮಿಯಲ್ಲಿ ಮೂರು ತಿಂಗಳ ಕಾಲ ಶ್ರೇಷ್ಠ ಜಾದೂಗಾರ ಗೋಪಿನಾಥ್ ಮುತುಕಾಡ್ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಗಿದೆ.

‘ಇಂಥ ಮಕ್ಕಳ ಸಮಗ್ರ ಬೆಳವಣಿಗೆಗೆ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸುವುದು  ಈ ಯೋಜನೆಯ ಮುಖ್ಯ ಉದ್ದೇಶ. ರಾಜ್ಯವನ್ನು ಅಂಗವಿಕಲ ಸ್ನೇಹಿಯಾಗಿ ಪರಿವರ್ತಿಸುವುದು ಮತ್ತು  ಇಂಥ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ  ಉದ್ದೇಶ ಹೊಂದಲಾಗಿದೆ’ ಎಂದು ಆರೋಗ್ಯ ಮತ್ತು ಸಾಮಾಜಿಕ ನ್ಯಾಯ ರಾಜ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ಸೋಮವಾರ  ಈ ಯೋಜನೆಗೆ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಚಾಲನೆ ನೀಡುವರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ, ನ್ಯಾಯಮೂರ್ತಿ ಪಿ.ಸದಾಶಿವಂ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT