ದೇಶದಲ್ಲಿ ಪ್ರಜಾಪ್ರಭುತ್ವವಿದ್ದು, ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಪತ್ರಿಕಾ, ಮಾಧ್ಯಮ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಲೆ ದೇಶದಲ್ಲಿ ಇದೆ. ಕಾಂಗ್ರೆಸ್ ಹೊರ ತರಲು ಹೊರಟಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಬಗ್ಗೆ ಯಾವುದೇ ಅಭ್ಯಂತರವಿಲ್ಲ. ಕಾನೂನುಬದ್ಧವಾಗಿ ಪತ್ರಿಕೆ ಪ್ರಕಟವಾದರೆ ಕೇಂದ್ರ ಸರ್ಕಾರ ಏಕೆ ಆಕ್ಷೇಪಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.