ನಗರದಲ್ಲಿ ಪತ್ರಿಕೆಗೆ ಮರು ಚಾಲನೆ ನೀಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ ಅವರು, ರಾಜಕೀಯ ಕಾರಣಗಳಿಂದ ಪತ್ರಿಕೆ ಪ್ರಕಟಣೆ ನಿಂತಿತ್ತು. ಈಗ ಪುನರ್ ಆರಂಭವಾಗಿದೆ. ಕೇಂದ್ರ ಸರ್ಕಾರ ಸತ್ಯದ ಪರ ನಿಲ್ಲುವವರನ್ನು ಅಧಿಕಾರಯುತವಾಗಿ ತುಳಿಯುತ್ತಿದೆ. ನ್ಯಾಷನಲ್ ಹೆರಾಲ್ಡ್ ಹೆಚ್ಚು ಶಕ್ತಿಯುತವಾಗಿದ್ದು, ಪತ್ರಿಕೆಯ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.